ತಿರುವನಂತಪುರ:ಜಾತ್ಯತೀತಮೌಲ್ಯಗಳನ್ನು ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾದ ಅಗತ್ಯವಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 11 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡ ಕೆಲವೇ ದಿನಗಳಲ್ಲಿ ಅವರು ಈ ಕ್ರಮ ಕೈಗೊಂಡಿದ್ದಾರೆ.
‘ಪೌರತ್ವ ತಿದ್ದುಪಡಿ ಕಾಯ್ದೆಯ ಪರಿಣಾಮವಾಗಿ ಸಮಾಜದ ದೊಡ್ಡ ವರ್ಗದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಬಯಸುವವರು ಒಗ್ಗಟ್ಟಾಗಬೇಕಾದ ಸಮಯವಿದು’ ಎಂದು ಪಿಣರಾಯಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸಿಎಎ ರದ್ದುಗೊಳಿಸಬೇಕು ಎಂದು ಕೇರಳ ವಿಧಾನಸಭೆಯಲ್ಲಿ ಮಂಗಳವಾರ ಆಡಳಿತಾರೂಢ ಸಿಪಿಐ(ಎಂ) ನಿಲುವಳಿ ಮಂಡಿಸಿತ್ತು. ಪ್ರತಿಪಕ್ಷವಾದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ನಿಲುವಳಿಗೆ ಬೆಂಬಲ ಸೂಚಿಸಿತ್ತು.
ಇನ್ನಷ್ಟು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.