ADVERTISEMENT

ನಕಲಿ ಜಾತಿ ಪ್ರಮಾಣಪತ್ರ: ಸಮೀರ್‌ ವಾಂಖೆಡೆ ವಿರುದ್ಧ ಬಾಂಬೆ ಹೈಕೋರ್ಟ್‌ಗೆ ಅರ್ಜಿ

ಕೇಂದ್ರ ಸೇವೆಯಿಂದ ವಜಾಗೊಳಿಸಲು ಕೋರಿಕೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2021, 14:24 IST
Last Updated 21 ನವೆಂಬರ್ 2021, 14:24 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿರುವ ಕಾರಣಕ್ಕೆ ಎನ್‌ಸಿಬಿ ಮುಂಬೈ ವಲಯದ ನಿರ್ದೇಶಕ ಸಮೀರ್‌ ವಾಂಖೆಡೆ ಅವರನ್ನು ಕೇಂದ್ರ ಸೇವೆಯಿಂದ ವಜಾಗೊಳಿಸಬೇಕು ಎಂದು ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಜಾತಿ ಪ್ರಮಾಣಪತ್ರ ಪರಿಶೀಲನಾ ಸಮಿತಿಯು ವಾಂಖೆಡೆ ಅವರ ಜಾತಿ ಮತ್ತು ಧರ್ಮದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಶೋಕ ಕಾಂಬ್ಳೆ ಅವರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಕೋರಿದ್ದಾರೆ.

ಹಿರಿಯ ವಕೀಲ ನಿತಿನ್‌ ಸತ್ಪುಟೆ ಅವರು ಕಾಂಬ್ಳೆ ಪರವಾಗಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಯುಪಿಎಸ್‌ಸಿ ಮತ್ತು ಕೇಂದ್ರ ಸರ್ಕಾರವನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ADVERTISEMENT

ವಾಂಖೆಡೆ ಅವರು ತಾನು ಮುಸ್ಲಿಂ ಎನ್ನುವ ಅಂಶವನ್ನು ಮರೆಮಾಚುವ ಮೂಲಕ ಕೆಲಸ ಗಿಟ್ಟಿಸಿಕೊಂಡಿದ್ದಾರೆ. ತಾವು ಹಿಂದೂ ಮತ್ತು ಪರಿಶಿಷ್ಟ ಜಾತಿಗೆ ಸೇರಿದವರು ಎಂದೂ ಹೇಳಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.