ನವದೆಹಲಿ: ದೇಶದ ವಿವಿಧೆಡೆ ಪ್ರವಾದಿ ಮೊಹಮ್ಮದ್ ಅವರನ್ನು ನಿರಂತರ ಅವಹೇಳನ ಮಾಡುವವರ ವಿರುದ್ಧ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಜಮಿಯತ್ ಉಲಮಾ-ಇ-ಹಿಂದ್ ಸಂಘಟನೆಯು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ದೇಶದ ವಿವಿಧೆಡೆ ಪ್ರವಾದಿ ಮೊಹಮ್ಮದ್ ಅವರನ್ನು ಅವಹೇಳನ ಮಾಡಿರುವ ಮತ್ತು ದ್ವೇಷ ಭಾಷಣ ಮಾಡಿರುವವರ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದೂ ಸಂಘಟನೆಯ ಅಧ್ಯಕ್ಷ ಮೌಲಾನ ಸಯ್ಯದ್ ಮಹಮೂದ್ ಅಸದ್ ಮದನಿ ಅರ್ಜಿಯಲ್ಲಿ ಕೋರಿದ್ದಾರೆ.
ದ್ವೇಷ ಅಪರಾಧ ಪ್ರಕರಣಗಳ ತನಿಖೆಗೆ ಸ್ವತಂತ್ರ ಸಮಿತಿಯೊಂದನ್ನು ರಚಿಸಲು ನಿರ್ದೇಶನ ನೀಡಬೇಕು ಎಂದೂ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.