ADVERTISEMENT

ಜನಸಂಖ್ಯಾ ನಿಯಂತ್ರಣ ಕಾನೂನು: ಕೇಂದ್ರಕ್ಕೆ ನಿರ್ದೇಶಿಸಲು ‘ಸುಪ್ರೀಂ’ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 15 ಜೂನ್ 2022, 14:05 IST
Last Updated 15 ಜೂನ್ 2022, 14:05 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ:ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ಕಲ್ಪಿಸುವ ಸಲುವಾಗಿಜನಸಂಖ್ಯಾ ನಿಯಂತ್ರಣಕ್ಕೆಕಠಿಣ ಕಾನೂನು ಜಾರಿಗೊಳಿಸುವ ಕಾರ್ಯಸಾಧ್ಯತೆಯನ್ನು ಖಾತ್ರಿಪಡಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಅಧ್ಯಾತ್ಮಿಕ ಪ್ರವಚನಕಾರ ದೇವಕಿನಂದನ್‌ ಠಾಕೂರ್‌ ಅವರು ಸಲ್ಲಿಸಿರುವ ಅರ್ಜಿಯಲ್ಲಿ ‘ಜನಸಂಖ್ಯಾ ಸ್ಫೋಟವೇ ಎಲ್ಲ ಸಮಸ್ಯೆಗಳಿಗೆ ಮೂಲ ಕಾರಣವಾಗಿದೆ. ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ಕಲ್ಪಿಸಲು ಜನಸಂಖ್ಯೆಯ ಸ್ಫೋಟ ನಿಯಂತ್ರಿಸುವ ಅವಶ್ಯಕತೆಯಿದೆ’ ಎಂದು ಕೋರಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ನಿಯಂತ್ರಿಸಲು ಎರಡು ಮಕ್ಕಳ ನಿಯಮ ಸೇರಿ ಕೆಲವು ಅಗತ್ಯ ಕ್ರಮಗಳನ್ನು ಜಾರಿಗೆ ತರುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪೂರಕವಾಗಿ ಠಾಕೂರ್‌ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.