ADVERTISEMENT

ಪಿ.ಎಂ. ಕೇರ್ಸ್ ನಿಧಿ ವರ್ಗಾವಣೆ‌: ವರದಿ ಕೇಳಿದ ಸುಪ್ರೀಂ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 23:51 IST
Last Updated 17 ಜೂನ್ 2020, 23:51 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಕೋವಿಡ್–19 ಸೋಂಕು ನಿಯಂತ್ರಣಕ್ಕಾಗಿ ಸರ್ಕಾರದೊಂದಿಗೆ ಕೈಜೋಡಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಪಿ.ಎಂ. ಕೇರ್ಸ್‌ ನಿಧಿ ಅಡಿ ನೀಡಿರುವ ದೇಣಿಗೆ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಕೇಂದ್ರಕ್ಕೆ ಸೂಚಿಸಿದೆ.

ಈ ಸಂಬಂಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌)ಯವಿಚಾರಣೆಯನ್ನು ಬುಧವಾರ ನಡೆಸಿದ ನ್ಯಾಯಮೂರ್ತಿ ಅಶೋಕ್‌ ಭೂಷಣ್ ನೇತೃತ್ವದ ಪೀಠ, ಈ ಸಂಬಂಧ ಎರಡು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಪಿ.ಎಂ. ಕೇರ್ಸ್ ನಿಧಿ ಮೂಲಕ ದೇಣಿಗೆ ರೂಪದಲ್ಲಿ ಇದುವರೆಗೆ ಸಂಗ್ರಹಿಸಲಾದ ಮೊತ್ತದ ಬಳಕೆ ಕುರಿತು ಕೇಂದ್ರ ಸರ್ಕಾರ ನಿರ್ದಿಷ್ಟ ಮಾಹಿತಿ ನೀಡಿಲ್ಲ ಎಂದು ಸ್ವಯಂ ಸೇವಾ ಸಂಸ್ಥೆಯಾದ ಸೆಂಟರ್‌ ಫಾರ್‌ ಪಿಐಎಲ್‌ ಸಲ್ಲಿಸಿರುವ ಅರ್ಜಿಯಲ್ಲಿ ದೂರಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.