ADVERTISEMENT

ಪಿಎಂ–ಕಿಸಾನ್‌: ಅನರ್ಹರಿಂದ ₹416 ಕೋಟಿ ವಸೂಲಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2025, 0:30 IST
Last Updated 26 ಮಾರ್ಚ್ 2025, 0:30 IST
<div class="paragraphs"><p>ರೂಪಾಯಿ</p></div>

ರೂಪಾಯಿ

   

ನವದೆಹಲಿ: ಪಿಎಂ–ಕಿಸಾನ್‌ ಯೋಜನೆಯಡಿ ಅರ್ಹತೆ ಇಲ್ಲದವರಿಗೆ ವಿತರಿಸಿದ್ದ ₹416 ಕೋಟಿ ಪ್ರೋತ್ಸಾಹಧನವನ್ನು ವಸೂಲಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರವು, ಮಂಗಳವಾರ ಸಂಸತ್‌ಗೆ ತಿಳಿಸಿದೆ.

2019ರಲ್ಲಿ ಈ ಯೋಜನೆ ಜಾರಿಗೊಂಡಿದ್ದು, ಇಲ್ಲಿಯವರೆಗೆ 19 ಕಂತುಗಳಲ್ಲಿ ₹3.68 ಲಕ್ಷ ಕೋಟಿಯನ್ನು ರೈತರಿಗೆ ವಿತರಿಸಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರು, ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ADVERTISEMENT

ವಾರ್ಷಿಕ ₹6 ಸಾವಿರ ಮೊತ್ತವನ್ನು ಮೂರು ಕಂತಿನಲ್ಲಿ ರೈತರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುತ್ತದೆ. ನಿಯಮಾವಳಿ ಪಾಲಿಸದವರಿಗೆ ಸೌಲಭ್ಯವನ್ನು ಸ್ಥಗಿತಗೊಳಿಸಲಾ ಗಿದೆ ಎಂದು ತಿಳಿಸಿದ್ದಾರೆ.

ಅರ್ಹರ ಭೂ ದಾಖಲೆ ಮತ್ತು ಆಧಾರ್‌ ನೋಂದಣಿಯನ್ನು ಕಡ್ಡಾಯಗೊಳಿಸಲಾಗಿದೆ. ಇ–ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಈ ನಿಯಮ ಪಾಲನೆ ಮಾಡದವರಿಗೆ ಹಣ ಜಮೆ ಮಾಡಿಲ್ಲ. ಈ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಾಕಿ ಮೊತ್ತವು ಅವರ ಖಾತೆಗಳಿಗೆ ಜಮೆಯಾಗಲಿದೆ ಎಂದು ವಿವರಿಸಿದ್ದಾರೆ.

ಆದಾಯ ತೆರಿಗೆ ಪಾವತಿದಾರರು, ಸಾರ್ವಜನಿಕ ವಲಯದ ಉದ್ದಿಮೆ, ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರು, ಸಾಂವಿಧಾನಿಕ ಹುದ್ದೆ ಹೊಂದಿದವರು ಈ ಸೌಲಭ್ಯಕ್ಕೆ ಅರ್ಹರಲ್ಲ. ಅಂತಹವರಿಗೆ ಪಾವತಿಸಿರುವ ಹಣವನ್ನು ವಸೂಲಿ ಮಾಡುವ ಜವಾಬ್ದಾರಿಯನ್ನು ರಾಜ್ಯಗಳಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.