ನವದೆಹಲಿ: ಕೋವಿಡ್–19 ವೈರಸ್ ಸೋಂಕು ಬಾಧಿತ ವುಹಾನ್ನಿಂದ ಭಾರತದ ಹಾಗೂ ಮಾಲ್ಡೀವ್ಸ್ನ 647 ಪ್ರಜೆಗಳನ್ನು ಭಾರತಕ್ಕೆ ಕರೆತಂದ ಏರ್ ಇಂಡಿಯಾ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಈ ಕುರಿತು ಪತ್ರದ ಮುಖೇನ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ‘ಸಂಕಷ್ಟಕ್ಕೆ ಸಿಲುಕಿದ್ದ ಜನರನ್ನು ರಕ್ಷಿಸಿದ ತಂಡದ ಸದಸ್ಯರಿಗೆ ಅಭಿನಂದನಾ ಪತ್ರವನ್ನು ಪ್ರಧಾನಿ ಅವರು ನೀಡಿದ್ದು, ನಾಗರಿಕ ವಿಮಾನಯಾನ ಇಲಾಖೆಯ ರಾಜ್ಯ ಖಾತೆ ಸಚಿವರು ಇದನ್ನು ಸಿಬ್ಬಂದಿಗೆ ಹಸ್ತಾಂತರಿಸಲಿದ್ದಾರೆ’ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಫೆ.5ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲೂ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.