ನವದೆಹಲಿ: ಎಡನೀರು ಮಠದ ಕೇಶವಾನಂದ ಭಾರತಿ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
‘ದೀನದಲಿತರ ಸಬಲೀಕರಣಕ್ಕಾಗಿ ಮತ್ತು ಸಮುದಾಯದ ಸೇವೆಗಾಗಿ ಪೂಜ್ಯ ಕೇಶವಾನಂದ ಭಾರತಿ ಸ್ವಾಮೀಜಿ ಅವರನ್ನು ನಾವು ಸದಾ ನೆನೆಯುತ್ತೇವೆ. ಅವರು ಭಾರತದ ಶ್ರೀಮಂತ ಸಂಸ್ಕೃತಿ ಮತ್ತು ಶ್ರೇಷ್ಠ ಸಂವಿಧಾನದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು.ಸ್ವಾಮೀಜಿ ಅವರು ಸದಾ ನಮ್ಮ ನೆನಪಿನಲ್ಲಿರುತ್ತಾರೆ.ಮುಂದಿನ ತಲೆಮಾರುಗಳಿಗೆ ಸ್ಫೂರ್ತಿಯಾಗಿರುತ್ತಾರೆ. ಓಂ ಶಾಂತಿ‘ ಎಂದು ಪ್ರಧಾನಿಯವರು ಟ್ವೀಟ್ನಲ್ಲಿ ಸಂತಾಪ ಸೂಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.