ನವದೆಹಲಿ: ಧಾರವಾಡ ಜಿಲ್ಲೆಯ ಇಟ್ಟಿಗಟ್ಟಿಯ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹನ್ನೊಂದು ಮಂದಿ ಮೃತಪಟ್ಟ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮೃತರ ಕುಟುಂಬದ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ. ಆ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಪ್ರಧಾನಮಂತ್ರಿ ಕಚೇರಿಯವರು ಪ್ರಧಾನಿಯವರ ಸಂತಾಪ ಸಂದೇಶವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ |ಅಪಘಾತ: ಸ್ನೇಹಿತೆಯರ ಸಂತಸ ಸಹಿಸದ ಜವರಾಯ
ಈ ಘಟನೆಯಲ್ಲಿ ಒಂಬತ್ತು ಮಹಿಳೆಯರು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು ದಾವಣಗೆರೆ ಜಿಲ್ಲೆಯವರು ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.