ನವದೆಹಲಿ: ಅಜ್ಮೇರ್ ದರ್ಗಾಕ್ಕೆ ಅರ್ಪಿಸಲು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರಿಗೆ ಚಾದರ ನೀಡಿದರು.
ಈ ಚಾದರ ಅನ್ನು ಪ್ರಧಾನಿ ಅವರ ಪರವಾಗಿ ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾಕ್ಕೆ ಅರ್ಪಿಸಲಾಗುತ್ತದೆ.
‘ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅವರ 809ನೇ ಉರುಸ್ ಸಂದರ್ಭದಲ್ಲಿ ಅಜ್ಮೇರ್ ಷರೀಫ್ ದರ್ಗಾಕ್ಕೆ ಸಮರ್ಪಿಸಲು ನಖ್ವಿ ಅವರಿಗೆ ಚಾದರ ನೀಡಿದ್ದೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.