ADVERTISEMENT

ವಿವೇಕಾನಂದರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಪಿಟಿಐ
Published 12 ಜನವರಿ 2023, 5:22 IST
Last Updated 12 ಜನವರಿ 2023, 5:22 IST
 ಪ್ರಧಾನ ಮಂತ್ರಿ  ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ    

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾಮಿ ವಿವೇಕಾನಂದರ 160ನೇ ಜಯಂತಿಯ ಪ್ರಯುಕ್ತ ಟ್ವೀಟ್ ಮೂಲಕ ಗೌರವ ನಮನ ಸಲ್ಲಿಸಿದರು.

ವಿವೇಕಾನಂದರ ಶ್ರೇಷ್ಠ ಆದರ್ಶಗಳು ಮತ್ತು ಆಲೋಚನೆಗಳು ದೇಶದ ಜನರಿಗೆ ಮಾರ್ಗದರ್ಶನ ನೀಡುತ್ತವೆ. ಅವರ ಜೀವನ, ದೇಶಭಕ್ತಿ, ಆಧ್ಯಾತ್ಮಿಕತೆ ಮತ್ತು ಸಮರ್ಪಣಾ ಮನೋಭಾವ ಯಾವಾಗಲೂ ಯುವ ಜನತೆಗೆ ಸ್ಫೂರ್ತಿ ನೀಡುತ್ತವೆ. ವಿವೇಕಾನಂದರು ತಮ್ಮ ಮೇಲೆ ಹೆಚ್ಚಿನ ಪ್ರಭಾವ ಬೀರಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ವಿವೇಕಾನಂದರ ಜನ್ಮದಿನದ ಅಂಗವಾಗಿ, ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿರುವ ’ರಾಷ್ಟ್ರೀಯ ಯುವಜನೋತ್ಸವ’ವನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ 4 ಗಂಟೆಗೆ ಉದ್ಘಾಟಿಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.