ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡು ಜನರ ಮನಸ್ಸಿನಲ್ಲಿರುವ ಸಂದೇಹಗಳನ್ನು ನಿವಾರಿಸಬೇಕು ಎಂದು ಅಂಬೇಡ್ಕರ್ ಮೊಮ್ಮಗ ಹಾಗೂ ವಂಚಿತ ಬಹುಜನ ಅಗಾಡಿ(ವಿಬಿಎ)ಯ ಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಶನಿವಾರ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮೊದಲು ಕೊರೊನಾ ವೈರಸ್ ಲಸಿಕೆಯನ್ನು ಹಾಕಿಸಿಕೊಂಡು ಜನರ ಮನಸ್ಸಿನಲ್ಲಿರುವ ಎಲ್ಲಾ ಸಂದೇಹಗಳನ್ನು ನಿವಾರಿಸಬೇಕು. ಅವರು ಲಸಿಕೆ ಪಡೆದ ನಂತರ ನಾನೂ ಕೂಡ ಲಸಿಕೆ ಹಾಕಿಸಿಕೊಳ್ಳಲು ಸಿದ್ಧ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮೂರು ಕೃಷಿ ಕಾಯ್ದೆ ರದ್ದು ಮಾಡಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ವಿಬಿಎ ಬೆಂಬಲ ನೀಡಿದೆ ಎಂದರು. ಇದೇ 27ರಂದು ನೂತನ ಕೃಷಿ ಕಾಯ್ದೆಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಕಾಂಗ್ರೆಸ್, ಸಿಪಿಐ ಮತ್ತು ಸಿಪಿಐ (ಎಂ) ಸೇರಿದಂತೆ ಪ್ರತಿಪಕ್ಷಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡುವಲ್ಲಿ ವಿಫಲವಾಗಿವೆ ಎಂದು ಅವರು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.