ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಾರಣಸಿಯ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿದರು.
ಗಂಗಾ ನದಿಯಲ್ಲಿ ಪ್ರಧಾನಿ ಕೈಗೊಂಡ ಪುಣ್ಯಸ್ನಾದ ಸನ್ನಿವೇಶವನ್ನು ಹಲವು ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದು, ವಿಡಿಯೊ ವೈರಲ್ ಆಗಿದೆ.
ನರೇಂದ್ರ ಮೋದಿ ಅವರು ತಾವು ಪ್ರತಿನಿಧಿಸುವ ವಾರಣಸಿ ಲೋಕಸಭಾ ಕ್ಷೇತ್ರಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ.
₹ 339 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಶ್ರೀ ಕಾಶಿ ವಿಶ್ವನಾಥ ಧಾಮದ 1 ನೇ ಹಂತದ ಯೋಜನೆಯನ್ನು ಮೋದಿ ಸೋಮವಾರ ಉದ್ಘಾಟಿಸಿದರು. ಇಂದು ಮುಂಜಾನೆ ಪ್ರಧಾನಿ ಮೋದಿ ಕಾಲ ಭೈರವ ದೇವಾಲಯದಲ್ಲೂ ಪ್ರಾರ್ಥನೆ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.