ADVERTISEMENT

ವಾರಾಣಸಿಯಲ್ಲಿ ಕೋವಿಡ್‌ ಉಲ್ಬಣ: ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ಪಿಟಿಐ
Published 18 ಏಪ್ರಿಲ್ 2021, 5:29 IST
Last Updated 18 ಏಪ್ರಿಲ್ 2021, 5:29 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿನ ಕೋವಿಡ್‌ ಪರಿಸ್ಥಿತಿಗಳ ಬಗ್ಗೆ ಪರಿಶೀಲನೆ ನಡೆಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಿಗ್ಗೆ 11 ಗಂಟೆಗೆ ಸಭೆ ಕರೆದಿದ್ದಾರೆ.

‘ಪ್ರಧಾನಿ ಅವರು ಹಿರಿಯ ಅಧಿಕಾರಿಗಳು, ಸ್ಥಳೀಯ ಆಡಳಿತಗಳ ಅಧಿಕಾರಿಗಳು, ವೈದ್ಯರ ಜತೆಗೆ ಸಮಾಲೋಚನೆ ನಡೆಸಲಿದ್ದಾರೆ’ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.

ಉತ್ತರ ಪ್ರದೇಶದ ಇತರ ನಗರಗಳಂತೆ ವಾರಾಣಸಿಯಲ್ಲಿ ಸಹ ಕೋವಿಡ್‌ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಳವಾಗಿದ್ದು, ಅಲ್ಲಿನ ಲೋಕಸಭಾ ಸದಸ್ಯರಾಗಿರುವ ನರೇಂದ್ರ ಮೋದಿ ಅವರು ಪರಿಸ್ಥಿತಿಯ ಅವಲೋಕನ ಮತ್ತು ಮಾರ್ಗದರ್ಶನಕ್ಕಾಗಿ ಈ ಸಭೆ ನಡೆಸಲಿದ್ದಾರೆ.

ADVERTISEMENT

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.