ADVERTISEMENT

ರಾಮನವಮಿಗೆ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

ಪಿಟಿಐ
Published 21 ಏಪ್ರಿಲ್ 2021, 6:13 IST
Last Updated 21 ಏಪ್ರಿಲ್ 2021, 6:13 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ಶ್ರೀರಾಮನವಮಿ‘ ದಿನದ ಅಂಗವಾಗಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ರಾಮನವಮಿ. ಶ್ರೀರಾಮನ ಸಂದೇಶದಂತೆ ಉತ್ತಮ ನಡತೆಯನ್ನು ರೂಢಿಸಿಕೊಳ್ಳಿ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಎಲ್ಲರೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಎಂದು ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

‌ಕೊರೊನಾ ನಿಯಮಗಳನ್ನು ಅನುಸರಿಸುವ ಮೂಲಕ ಕೊರೊನಾ ಸೋಂಕಿನಿಂದ ದೂರವಿರಿ. 'ದವಾಯಿ ಭೀ, ಕಡಾಯಿ ಭಿ' (ಔಷಧಿಯೂ ಇದೆ, ಎಚ್ಚರಿಕೆಯೂ ಇದೆ) ಮಂತ್ರವನ್ನು ನೆನಪಿನಲ್ಲಿಟ್ಟುಕೊಳ್ಳಿ'ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.