ADVERTISEMENT

LIVE | 80 ಕೋಟಿ ಮಂದಿಗೆ ಉಚಿತ ಪಡಿತರ ಯೋಜನೆ ಮುಂದುವರಿಕೆ: ಪ್ರಧಾನಿ ಮೋದಿ ಘೋಷಣೆ

ಕಳೆದ ವರ್ಷ ಕೋವಿಡ್-19 ಸಾಂಕ್ರಾಮಿಕ ಹರಡಲು ಆರಂಭವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯನ್ನು ಉದ್ದೇಶಿಸಿ ಅನೇಕ ಬಾರಿ ಮಾತನಾಡಿದ್ದಾರೆ. ಸಲಹೆ ಸೂಚನೆಗಳನ್ನು ನೀಡುತ್ತಲೇ ಬಂದಿದ್ದಾರೆ. ಇದೀಗ ಅವರು ಮತ್ತೊಮ್ಮೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಮೋದಿ ಮಾತಿನ ಕ್ಷಣಕ್ಷಣದ ಅಪ್‌ಡೇಟ್ಸ್ ಇಲ್ಲಿ ಲಭ್ಯ

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 12:13 IST
Last Updated 7 ಜೂನ್ 2021, 12:13 IST

ನಾವೆಲ್ಲರೂ ಕೊರೊನಾ ವಿರುದ್ಧದ ಈ ಯುದ್ಧವನ್ನು ಜಯಿಸುತ್ತೇವೆ, ಭಾರತವು ಕೊರೊನಾ ವಿರುದ್ಧ ಜಯಿಸುತ್ತದೆ. ಎಲ್ಲರಿಗೂ ಶುಭವಾಗಲಿ, ಧನ್ಯವಾದ

ಕೆಲವು ಕಡೆಗಳಲ್ಲಿ ಕೊರೊನಾ ಕರ್ಫ್ಯೂ ಸಡಿಲಿಸಲಾಗುತ್ತಿದೆ. ಆದರೆ, ಕೊರೊನಾ ಓಡಿ ಹೋಗಿದೆ ಎಂದು ತಿಳಿಯಬೇಕಿಲ್ಲ. ಎಚ್ಚರಿಕೆ ವಹಿಸಲೇಬೇಕು.

ಸಮಾಜದ ಪ್ರಬುದ್ಧ, ಯುವ ಜನರಲ್ಲಿ ಮನವಿ ಏನೆಂದರೆ, ಲಸಿಕೆ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಹಕಾರ ನೀಡಿ.

ಲಸಿಕೆ ಬಗ್ಗೆ ಶಂಕೆ ಹುಟ್ಟಿಸಿಹಾಕಿದವರು ಅವರು ಮುಗ್ಧ ಜನರ ಜೀವನದ ಜೊತೆ ಚೆಲ್ಲಾಟವಾಡಿದರು. ಅಂಥವರಿಂದ ದೂರವಿರಿ.

ಇದನ್ನೆಲ್ಲಾ ದೇಶವೇ ನೋಡುತ್ತಿದೆ.

ಭಾರತದ ಲಸಿಕೆ ಬಂದಾಗ, ಅದರ ಬಗ್ಗೆ ಶಂಕೆ ಮತ್ತಷ್ಟು ಹೆಚ್ಚುವಂತೆ ಮಾಡಲಾಯಿತು.

ಭಾರತದಲ್ಲಿ ಲಸಿಕೆ ಬಗ್ಗೆ ಕಾರ್ಯಕ್ರಮ ಆರಂಭವಾದಂದಿನಿಂದಲೇ ಕೆಲವು ಮಂದಿ ಜನ ಸಾಮಾನ್ಯರ ಮನಸ್ಸಿನಲ್ಲಿ ಶಂಕೆಯ ಬೀಜ ಬಿತ್ತುವ ಕೆಲಸ ಮಾಡಿದರು.

ದೇಶದಲ್ಲಿ ಇಷ್ಟೆಲ್ಲ ಪ್ರಯಾಸ ನಡೆಸುತ್ತಿದ್ದರೂ, ಲಸಿಕೆಯ ಕುರಿತು ಭ್ರಮೆ, ಭಯ, ಆತಂಕ ಮೂಡಿದೆ.

ಪ್ರತಿಯೊಬ್ಬ ಬಡ ನಾಗರಿಕರೊಂದಿಗೆ ಸರ್ಕಾರವೂ ಜೊತೆಗಿರುತ್ತದೆ. ನವೆಂಬರ್‌ವರೆಗೆ ಎಲ್ಲ 80 ಕೋಟಿ ಮಂದಿಗೆ, ಉಚಿತವಾಗಿ ಧಾನ್ಯ ವಿತರಿಸಲಾಗುತ್ತದೆ.

ಈ ಯೋಜನೆಯು ದೀಪಾವಳಿವರೆಗೂ ಮುಂದುವರಿಯಲಿದೆ.

ಈ ವರ್ಷವೂ ಮೇ ಹಾಗೂ ಜೂನ್ ತಿಂಗಳಿಗೂ ಈ ಯೋಜನೆಯನ್ನು ವಿಸ್ತರಿಸಲಾಗುತ್ತಿದೆ.

ಹಿಂದಿನ ವರ್ಷ ಕೊರೊನಾ ಕಾರಣದಿಂದ ಲಾಕ್‌ಡೌನ್ ಮಾಡಲಾಗಿತ್ತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಮಂದಿಗೆ ಉಚಿರ ರೇಷನ್ ಒದಗಿಸಲಾಗಿತ್ತು.

ಲಸಿಕಾಕರಣದ ಹೊರತಾಗಿ, ಇವತ್ತು ಮತ್ತೊಂದು ನಿರ್ಧಾರವನ್ನು ಘೋಷಿಸಲಾಗುತ್ತಿದೆ

ಲಸಿಕೆಯ ಉಪಲಬ್ಧತೆಯ ಅನುಸಾರ, ಎಲ್ಲ ಕಡೆ ಲಸಿಕೆ ವಿತರಣೆಯಾಗಲಿ.

ಲಸಿಕೆಯ ಪ್ರತಿಯೊಂದು ಡೋಸ್ ಕೂಡ ಅತ್ಯಂತ ಮಹತ್ವಪೂರ್ಣವಾದುದು. ಒಂದು ಡೋಸ್ ಜೊತೆಗೂ ಒಂದು ಜೀವವೇ ಸೇರಿಕೊಂಡಿದೆ. ಕೇಂದ್ರವು, ಯಾರಿಗೆ ಎಷ್ಟು ಲಸಿಕೆ ದೊರೆಯುತ್ತದೆ ಎಂಬುದನ್ನು ವಾರಗಳ ಮುಂಚೆಯೇ ತಿಳಿಸಿದೆ.

ಕೊರೊನಾದ ಹೋರಾಟದಲ್ಲಿ 130 ಕೋಟಿ ಭಾರತೀಯರು ಪರಸ್ಪರ ಸಹಕಾರದಿಂದ, ದಿನ-ರಾತ್ರಿ ಶ್ರಮ ವಹಿಸಿಯೇ ಭಾಗವಹಿಸುತ್ತಿದ್ದಾರೆ. ಯಶಸ್ಸು ಸಿಗುವಲ್ಲಿ ಶ್ರಮಿಸುತ್ತೇವೆ, ಲಸಿಕಾಕರಣವೂ ಯಶಸ್ವಿಯಾಗುವಲ್ಲಿ ನಾವೂ ಪರಿಶ್ರಮ ವಹಿಸುತ್ತೇವೆ.

ಅವರು ಗರಿಷ್ಠ 150 ರೂ. ಸೇವಾ ಶುಲ್ಕ ತೆಗೆದುಕೊಂಡು, ಲಸಿಕೆಯನ್ನು ನೀಡಬಹುದು

ಉಚಿತ ಲಸಿಕೆ ಬೇಡ ಎಂದುಕೊಂಡವರಿಗೆ, ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳುವ ಸಾಮರ್ಥ್ಯ ಇರುವವರಿಗಾಗಿ ಅಂಥವರಿಗಾಗಿಯೇ ಖಾಸಗಿ ಆಸ್ಪತ್ರೆಗಳಿಗೂ ಶೇ.25 ಲಸಿಕೆಗಳನ್ನು ಒದಗಿಸಲಾಗುತ್ತದೆ.

ಎಲ್ಲ ದೇಶವಾಸಿಗಳಿಗೆ ಭಾರತ ಸರ್ಕಾರವೇ ಉಚಿತ ಲಸಿಕೆಯನ್ನು ನೀಡುತ್ತದೆ.

ಯಾವುದೇ ರಾಜ್ಯಸರ್ಕಾರಗಳಿಗೆ ಲಸಿಕಾಕರಣಕ್ಕಾಗಿ ಯಾವುದೇ ಹಣವನ್ನು ಪಾವತಿಸಬೇಕಿಲ್ಲ.

ಜೂ.21ರಂದು ಅಂತರರಾಷ್ಟ್ರೀಯ ಯೋಗದಿವಸ. ಆ ದಿನದಿಂದ 18 ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುತ್ತದೆ.

ಲಸಿಕಾಕರಣದ ರಾಜ್ಯಗಳ ಶೇ.25 ಭಾಗವನ್ನೂ ಭಾರತ ಸರ್ಕಾರವೇ ವಹಿಸಿಕೊಂಡಿತು. ಮುಂದಿನ ಎರಡು ವಾರಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೇರಿಕೊಂಡು, ಹೊಸ ಮಾರ್ಗಸೂಚಿ ಅನುಸರಿಸಬೇಕಿದೆ.

ಹೀಗಾಗಿ ಹಿಂದಿನ ವ್ಯವಸ್ಥೆಯೇ ಚೆನ್ನಾಗಿತ್ತು ಎಂದು ರಾಜ್ಯಗಳು ಹೇಳತೊಡಗಿದವು. ರಾಜ್ಯಗಳ ಈ ಸಮಸ್ಯೆಯಿಂದಾಗಿ, ದೇಶವಾಸಿಗಳಿಗೆ ಯಾವುದೇ ಸಮಸ್ಯೆಯಾಗಬಾರದೆಂಬ ಕಾರಣಕ್ಕೆ, ಮೇ 1ಕ್ಕಿಂತ ಹಿಂದಿನ ವ್ಯವಸ್ಥೆಯನ್ನೇ ಮರುಸ್ಥಾಪಿಸಲಾಯಿತು.

ಲಸಿಕೆಗಾಗಿ ಜನರ ಸರದಿ ಹೆಚ್ಚತೊಡಗಿತು, ಮೇ ತಿಂಗಳ ಎರಡು ವಾರಗಳಲ್ಲಿ ಸಮಸ್ಯೆಯೂ ಹೆಚ್ಚಾಗತೊಡಗಿತು. ಇದನ್ನು ನೋಡಿ, ಲಸಿಕೆಯ ಕೆಲಸವನ್ನು ರಾಜ್ಯಗಳಿಗೇ ಬಿಡಬೇಕು ಎಂದು ಹೇಳಿದವರ ಮಾತುಗಳೂ ಬದಲಾಗತೊಡಗಿದವು.

ಇಷ್ಟು ದೊಡ್ಡ ಕಾರ್ಯದಲ್ಲಿ ಯಾವೆಲ್ಲ ಕಷ್ಟ ಇದೆ ಎಂಬುದು ಈ ರಾಜ್ಯಗಳಿಗೂ ತಿಳಿಯತೊಡಗಿತು. ರಾಜ್ಯಗಳಿಗೂ ಪರಿಸ್ಥಿತಿಯು ಅರಿವಿಗೆ ಬಂದಿತು.

ಮೇ 1ರಿಂದ ಶೇ.25ರ ಕೆಲಸವನ್ನು ಎಲ್ಲ ರಾಜ್ಯಗಳಿಗೂ ನೀಡಲಾಯಿತು.

ರಾಜ್ಯಗಳ ಈ ಬೇಡಿಕೆಯನ್ನು ಮನಸ್ಸಿನಲ್ಲಿರಿಸಿಕೊಂಡು, 16 ಜನವರಿಯಿಂದ ಆರಂಭವಾದ ವ್ಯವಸ್ಥೆಯ ಅನುಸಾರ, ರಾಜ್ಯದ ಉತ್ಸಾಹಗಳನ್ನು ಪರಿಗಣಿಸಿ, ಶೇ.25 ಕೆಲಸವನ್ನು ಅವರಿಗೇ ನೀಡುವುದೆಂದು ತೀರ್ಮಾನಿಸಲಾಯಿತು.

ಈ ಮಧ್ಯೆ, ಕೆಲವು ರಾಜ್ಯ ಸರ್ಕಾರಗಳು, ಲಸಿಕೆ ವಿತರಣೆಯನ್ನು ವಿಕೇಂದ್ರೀಕರಿಸಬೇಕು, ಕೇಂದ್ರವೇ ಯಾಕೆ ನಿರ್ಧರಿಸಬೇಕು? ವೃದ್ಧರಿಗೇಗೆ ಲಸಿಕೆ ಮೊದಲು ನೀಡಬೇಕು? ಎಲ್ಲ ವರ್ಗದವರಿಗೆ ಯಾಕೆ ಕೊಡುತ್ತಿಲ್ಲ ಎಂದೆಲ್ಲಾ ಪ್ರಶ್ನೆ ಕೇಳಲಾಯಿತು.

ಎಲ್ಲರಿಗೂ ಉಚಿತ ಲಸಿಕೆ ನೀಡುವ ನಿಟ್ಟಿನಲ್ಲಿ ದೇಶವು ಮುನ್ನಡೆಯುತ್ತಿತ್ತು. ದೇಶದ ನಾಗರಿಕರು ಕೂಡ ತಮ್ಮ ಸರದಿ ಬಂದಾಗ ಲಸಿಕೆ ಹಾಕಿಸಿಕೊಂಡರು.

ಭಾರತ ಸರ್ಕಾರವು ಬೃಹತ್ ಮಾರ್ಗಸೂಚಿ ತಯಾರಿಸಿ ಎಲ್ಲ ರಾಜ್ಯಗಳಿಗೆ ನೀಡಿತು. ರಾಜ್ಯವು ಕೂಡ ತನ್ನ ಅಗತ್ಯಗಳಿಗೆ ತಕ್ಕಂತೆ ಕೆಲಸ ಮಾಡಬಹುದು. ಕೊರೊನಾ ಕರ್ಫ್ಯೂ, ಮೈಕ್ರೋ ಕಂಟೇನ್ಮೆಂಟ್ ವಲಯ ಮಾಡುವುದು, ಚಿಕಿತ್ಸೆಗೆ ಸಂಬಂಧಿತ ಕೆಲಸ - ಎಲ್ಲವನ್ನೂ ಅದರಲ್ಲಿ ನೀಡಲಾಗಿತ್ತು.

ಇಷ್ಟೆಲ್ಲ ಆದರೂ, ಎಲ್ಲವನ್ನೂ ಕೇಂದ್ರವೇ ಯಾಕೆ ಮಾಡಬೇಕು, ರಾಜ್ಯ ಸರ್ಕಾರಗಳಿಗೆ ಯಾಕೆ ಅನುಮತಿ ಕೊಡುವುದಿಲ್ಲ ಎಂದು ಕೇಳಲಾಯಿತು.

ಗರಿಷ್ಠ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಿದ ಪರಿಣಾಮವಾಗಿಯೇ ಅವರು ಕೊರೊನಾದಿಂದ ರಕ್ಷಣೆ ಪಡೆದು, ಅಗತ್ಯವಿರುವವರಿಗೆ ಸೇವೆ ನೀಡುವುದು ಸಾಧ್ಯವಾಯಿತು.

ಕೊರೊನಾದ ಎರಡೇ ಅಲೆಗಿಂತ ಮುಂಚಿತವಾಗಿ ನಮ್ಮ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡದೇ ಹೋಗಿದ್ದರೆ, ಏನಾಗುತ್ತಿತ್ತು?

ಇದರ ಪರಿಣಾಮವಾಗಿ ಆರೋಗ್ಯ ಕಾರ್ಯಕರ್ತರು ಮತ್ತಿತರ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಯಿತು.

ಸಂಸತ್ತಿನ ವಿವಿಧ ಪಕ್ಷಗಳ ಸಹಯೋಗಿಗಳ ಸಲಹೆಗಳನ್ನು ಪರಿಗಣಿಸಿ, ಯಾರಿಗೆ ಕೊರೊನಾದಿಂದ ಹೆಚ್ಚು ಅಪಾಯವಿದೆಯೋ ಅವರಿಗೆ ಆದ್ಯತೆ ನೀಡಲಾಯಿತು

ವಿಶ್ವ ಆರೋಗ್ಯ ಸಂಸ್ಥೆಯ ನೀತಿಯ ಆಧಾರದಲ್ಲಿ ಭಾರತವು ಕೂಡ ಲಸಿಕಾಕರಣದಲ್ಲಿ ತೊಡಗಿಕೊಂಡಿತು.

ಇಷ್ಟು ಕಡಿಮೆ ಸಮಯದಲ್ಲಿ ಲಸಿಕೆ ತಯಾರಿಸುವುದು ಇಡೀ ಮಾನವ ಕುಲಕ್ಕೆ ಬಲು ದೊಡ್ಡ ಉಪಯೋಗ.

ಇದಕ್ಕೆ ಯಶಸ್ಸು ಸಿಕ್ಕಿದರೆ, ಭಾರತದ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ಸಿಗುತ್ತದೆ

ಇದಲ್ಲದೆ, ನೇಸಲ್ (ಮೂಗಿನ ಮೂಲಕ) ಸಿಂಪಡಿಸಲಾಗುವ ಲಸಿಕೆಯ ಪ್ರಯೋಗವೂ ನಡೆಯುತ್ತಿದೆ.

ಇದೀಗ ಮೂರನೇ ಅಲೆಯ ಆತಂಕವಿರುವುದರಿಂದಾಗಿ, ಮಕ್ಕಳಿಗಾಗಿ ಎರಡು ಲಸಿಕೆಗಳ ಪ್ರಯೋಗವೂ ವೇಗವಾಗಿ ನಡೆಯುತ್ತಿದೆ.

ಬೇರೆ ದೇಶಗಳಿಂದಲೂ ಲಸಿಕೆ ಖರೀದಿ ಪ್ರಕ್ರಿಯೆಗಳಿಗೆ ವೇಗ ನೀಡಲಾಗಿದೆ.

ಇಂದು, ದೇಶಗಳಲ್ಲಿ 7 ಕಂಪನಿಗಳು ವಿಭಿನ್ನ ರೀತಿಯ ಲಸಿಕೆಗಳನ್ನು ಉತ್ಪಾದಿಸಲು ಆರಂಭಿಸಿವೆ.

ಭಾರತದಲ್ಲಿ ಲಸಿಕೆ ತಯಾರಿಸುವ ಕಂಪನಿಗಳಿಗೆ ಎಲ್ಲ ರೀತಿಯಲ್ಲೂ ಸರ್ಕಾರವು ನೆರವು ನೀಡಿ, ಭುಜಕ್ಕೆ ಭುಜ ಕೊಟ್ಟು ಗಟ್ಟಿಯಾಗಿ ನಿಂತಿತು.

ವಿಶ್ವಾಸೇನ ಸಿದ್ಧಿ

ವಿಶ್ವಾಸದಿಂದಲೇ ಸಿದ್ಧಿ ಎಂಬ ಭಾರತದ ಮೂಲಮಂತ್ರಕ್ಕೆ ಪೂರಕವಾಗಿ, 23 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ. ಭಾರತದಂತಹಾ ವಿಶಾಲ ದೇಶದಲ್ಲಿ ಇದೊಂದು ಬಲು ದೊಡ್ಡ ಸಾಧನೆ.

ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ ಇಲ್ಲಿ ನೋಡಿ

ಲಸಿಕೆ ವಿತರಣೆಗೆ ಮಿಷನ್ ಇಂದ್ರಧನುಶ್ ಆರಂಭಿಸಿದ್ಧೆವೆ

ಲಸಿಕೆಗೆ ಭಾರೀ ಬೇಡಿಕೆ ಇದೆ. ಆದರೆ, ಉತ್ಪಾದಿಸುವ ಕಂಪನಿಗಳು ಕಡಿಮೆ ಇವೆ.

ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶೀಯವಾಗಿ ಲಸಿಕೆ ಅಭಿವೃದ್ಧಿಪಡಿಸಿದೆವು

ಕೊರೊನಾ 100 ವರ್ಷಗಳಲ್ಲಿ ಬಂದ ಅತಿ ದೊಡ್ಡ ಮಹಾಮಾರಿ

ನಮ್ಮ ಅನೇಕ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದೇವೆ: ಮೋದಿ

ಕೊರೊನಾ ಎರಡನೇ ಅಲೆಯೊಂದಿಗೆ ಹೋರಾಟ ಪ್ರಗತಿಯಲ್ಲಿದೆ: ಮೋದಿ

ಯಾವ ವಿಷಯದ ಕುರಿತು ಪ್ರಧಾನಿ ಮೋದಿ ಪ್ರಸ್ತಾಪಿಸಬಹುದು ಎಂಬ ಕುತೂಹಲ ಜನರಲ್ಲಿ ಹೆಚ್ಚಾಗಿದೆ

ಪ್ರಧಾನಿ ಮೋದಿ ಭಾಷಣಕ್ಕೆ ಕ್ಷಣಗಣನೆ, ಕೆಲವೇ ಕ್ಷಣಗಳಲ್ಲಿ ದೇಶವನ್ನು ಉದ್ದೇಶಿಸಿ ಮೋದಿ ಮಾತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT