ADVERTISEMENT

ಸಾಲ ಮನ್ನಾ: ಕರ್ನಾಟಕ ಸರ್ಕಾರದ ನಿರ್ಧಾರ ಅಪಹಾಸ್ಯ ಎಂದ ಪ್ರಧಾನಿ ಮೋದಿ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2018, 20:01 IST
Last Updated 29 ಡಿಸೆಂಬರ್ 2018, 20:01 IST
ಪ್ರಧಾನಿ ಮೋದಿ ಅವರು ಸುಹೇಲ್‌ ದೇವ್‌ ಅಂಚೆಚೀಟಿ ಬಿಡುಗಡೆ ಮಾಡಿದರು
ಪ್ರಧಾನಿ ಮೋದಿ ಅವರು ಸುಹೇಲ್‌ ದೇವ್‌ ಅಂಚೆಚೀಟಿ ಬಿಡುಗಡೆ ಮಾಡಿದರು   

ಲಖನೌ: ಜೆಡಿಎಸ್‌–ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರದ ರೈತರ ಸಾಲಮನ್ನಾ ನಿರ್ಧಾರವನ್ನು ‘ಅಪಹಾಸ್ಯ’ ಎಂದು ಮೋದಿ ಲೇವಡಿ ಮಾಡಿದ್ದಾರೆ.

ಕರ್ನಾಟಕದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರೈತರ ಸಾಲಮನ್ನಾ ಮಾಡುವುದಾಗಿ ಕಾಂಗ್ರೆಸ್‌ ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ ಎಂದು ಅವರು ತರಾಟೆಗೆ ತೆಗೆದುಕೊಂಡರು.ಕರ್ನಾಟಕದಲ್ಲಿ ಕಾಂಗ್ರೆಸ್‌–ಜೆಡಿಎಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದು ಬಂದು ಆರು ತಿಂಗಳಾದರೂ ರೈತರ ಸಾಲಮನ್ನಾ ಭರವಸೆ ಈಡೇರಿಲ್ಲ ಎಂದರು.

ADVERTISEMENT

ಇದುವರೆಗೂ ಕೇವಲ 800 ರೈತರ ಸಾಲವನ್ನು ಮಾತ್ರ ಮನ್ನಾ ಮಾಡಲಾಗಿದೆ. ಸಾಲ ಪಾವತಿಸುವಂತೆ ಪೊಲೀಸರು ರೈತರ ಬೆನ್ನು ಬಿದ್ದಿದ್ದಾರೆ ಎಂದು ಮೋದಿ ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.