ಹಿಸುವಾ: ಚೀನಾ ನಮ್ಮ ಗಡಿಯೊಳಗೆ ನುಗ್ಗಿದರೂ ಯಾರೊಬ್ಬರೂ ಒಳಗೆ ಬಂದಿಲ್ಲ ಎಂದು ಸುಳ್ಳು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸೈನಿಕರಿಗೆ ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಬಿಹಾರದ ನವಾಡಾ ಜಿಲ್ಲೆಯ ಹಿಸುವಾದಲ್ಲಿ ಚುನಾವಣಾರ್ಯಾಲಿಯನ್ನುದ್ದೇಶಿ ಮಾತನಾಡಿದ ರಾಹುಲ್ ಗಾಂಧಿ,‘ ಚೀನಾದ ಸೈನ್ಯವು ಭಾರತದ ಭೂಪ್ರದೇಶಕ್ಕೆ ನುಸುಳಿದೆ. ಭಾರತದ 1,200 ಕಿ.ಮೀ ಭೂ ಪ್ರದೇಶವನ್ನು ಅವರು ಅತಿಕ್ರಮಿಸಿದ್ದಾರೆ. ಚೀನಾದ ಸೈನಿಕರು ಭಾರತದೊಳಗೆ ನುಸುಳಿದ್ದರೂ, ಪ್ರಧಾನಿ ಏಕೆ ಸುಳ್ಳು ಹೇಳಿ ನಮ್ಮ ಸೈನಿಕರನ್ನು ಅವಮಾನಿಸುತ್ತಿದ್ದಾರೆ. ಚೀನಾದ ಸೈನಿಕರನ್ನು ಯಾವಾಗ ಭಾರತದಿಂದ ಹೊರ ಹಾಕುತ್ತೀರಿ’ ಎಂದು ಅವರು ಪ್ರಶ್ನಿಸಿದ್ದಾರೆ.
‘ಲಾಕ್ಡೌನ್ನಿಂದ ವಲಸೆ ಕಾರ್ಮಿಕರು ಬಹಳ ತೊಂದರೆ ಎದುರಿಸಿದ್ದಾರೆ. ಇತರೆ ರಾಜ್ಯಗಳು ಬಿಹಾರದವರನ್ನು ಊರಿನಿಂದ ಓಡಿಸುತ್ತಿದ್ದಾಗ ಮೋದಿ ಅವರು ಏನು ಸಹಾಯ ಮಾಡಿದ್ದಾರೆ ಎಂದು ರಾಹುಲ್ ಪ್ರಶ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.