ಚೆನ್ನೈ: ಮಹಾಬಲಿಪುರಂನಲ್ಲಿ ನಡೆದ ಚೀನಾ ಮತ್ತು ಭಾರತ ನಡುವಿನ ಎರಡನೇ ಶೃಂಗಸಭೆಗೆ ಅತ್ಯುತ್ತಮ ವ್ಯವಸ್ಥೆ ಮಾಡಲಾಗಿತ್ತು ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರ ಕಾರ್ಯವೈಖರಿಯನ್ನು ಹೊಗಳಿದ್ದಾರೆ.
‘ಚೀನಾ ಅಧ್ಯಕ್ಷರಿಗೆ ನೀಡಲಾಗಿದ್ದ ಆತಿಥ್ಯ ಅದ್ಭುತವಾಗಿತ್ತು. ಇದು ನಮ್ಮ ಸಂಸ್ಕೃತಿ ಹಾಗೂ ತತ್ವ–ಆದರ್ಶಗಳನ್ನು ಬಿಂಬಿಸುವಂತಿತ್ತು’ ಎಂದು ಪತ್ರ ಬರೆದಿದ್ದಾರೆ.
ಚೀನಾದ ರಾಯಭಾರಿ ಸನ್ ವೀಡಾಂಗ್ ಅವರೂ ಪಳನಿಸ್ವಾಮಿ ಅವರಿಗೆ ಪತ್ರ ಬರೆದು, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.