ADVERTISEMENT

ಕಷ್ಟದ ಸಮಯದಲ್ಲಿ ಬಲಿಷ್ಠ ನಾಯಕನ ಅಗತ್ಯವಿದೆ: ಪ್ರಧಾನಿ ಮೋದಿ

ಪಿಟಿಐ
Published 22 ಫೆಬ್ರುವರಿ 2022, 14:29 IST
Last Updated 22 ಫೆಬ್ರುವರಿ 2022, 14:29 IST
ನರೇಂದ್ರ ಮೋದಿ – ಪಿಟಿಐ ಚಿತ್ರ
ನರೇಂದ್ರ ಮೋದಿ – ಪಿಟಿಐ ಚಿತ್ರ   

ಬಹ್ರೇಚ್: ವಿಶ್ವದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಇರುವಾಗ ಭಾರತವು ಬಲಿಷ್ಠವಾಗಿರಬೇಕಿದೆ. ಕಷ್ಟದ ಸಂದರ್ಭದಲ್ಲಿ ಬಲಿಷ್ಠ ನಾಯಕನ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶದ ಬಹ್ರೇಚ್‌ನಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ‘ಗರೀಬಿ ಹಟಾವೋ’ ಮತ್ತು ಸಮಾಜವಾದದ ಹೆಸರಿನಲ್ಲಿ ದೇಶವನ್ನು ಲೂಟಿ ಮಾಡಲಾಗಿದೆ ಎಂದು ಟೀಕಿಸಿದ್ದಾರೆ.

ADVERTISEMENT

ಅಹಮದಾಬಾದ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಪ್ರತಿಪಕ್ಷಗಳು ಮೌನವಾಗಿರವುದೇಕೆ ಎಂದು ಪ್ರಶ್ನಿಸಿದ ಅವರು, ಭಯೋತ್ಪಾದಕರಿಗೆ ಯಾರು ನೆರವು ನೀಡುತ್ತಿದ್ದಾರೆ ಎಂಬುದು ದೇಶದ ಜನರಿಗೆ ಈಗ ಗೊತ್ತಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.