ನವದೆಹಲಿ: ಹೊಸ ವರ್ಷದಂದೇ ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಿಂದ ಫಲಾನುಭವಿ ರೈತರಿಗೆ 10ನೇ ಕಂತಿನ ₹20,900 ಕೋಟಿಯನ್ನು ಬಿಡುಗಡೆ ಮಾಡಿದ್ದಾರೆ.
ಶನಿವಾರ ಮಧ್ಯಾಹ್ನ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ 10 ಕೋಟಿಗೂ ಹೆಚ್ಚು ಫಲಾನುಭವಿ ರೈತರಿಗೆ ಹಣ ಬಿಡುಗಡೆ ಮಾಡಿದ್ದಾರೆ. ರೈತರ ಖಾತೆಗೆ ಸೇರ್ಪಡೆಗೊಳ್ಳುತ್ತಿರುವ 10ನೇ ಕಂತು ಇದಾಗಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ವಾರ್ಷಿಕ ₹6,000 ದಂತೆ ಮೂರು ಕಂತುಗಳಲ್ಲಿ ಫಲಾನುಭವಿಗಳಿಗೆ ಸಿಗಲಿದೆ. ನಾಲ್ಕು ತಿಂಗಳಿಗೊಮ್ಮೆ ₹2,000 ದಂತೆ ರೈತರ ಖಾತೆಗೆ ನೇರವಾಗಿ ಜಮೆಯಾಗುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.