ADVERTISEMENT

ಕೇದಾರನಾಥ ಅಭಿವೃದ್ಧಿ: ಪ್ರಧಾನಿ ಪರಿಶೀಲನೆ

ಪಿಟಿಐ
Published 15 ಜುಲೈ 2020, 12:32 IST
Last Updated 15 ಜುಲೈ 2020, 12:32 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಕೇದಾರನಾಥ ಧಾಮ‌ ಅಭಿವೃದ್ಧಿ ಮತ್ತು ಪ್ರಯಾಣಿಕ ಸೌಲಭ್ಯಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕೇದರನಾಥ ದೇವಸ್ಥಾನ ಮತ್ತು ಜಗದ್ಗುರು ಆದಿ ಶಂಕರಾಚಾರ್ಯರ ಸಮಾಧಿ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದರ ಜೊತೆಗೆ ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಲಾಗಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಗೌರಿಕುಂಡ್‌– ಕೇದರನಾಥ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸೌಲಭ್ಯಗಳನ್ನು ದೊರೆಯುವಂತೆ ನೋಡಿಕೊಳ್ಳುವುದರ ಜೊತೆಗೆ ತಂತ್ರಜ್ಞಾನವನ್ನು ಬಳಸಿಕೊಂಡು ಈ ಸ್ಥಳದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನುಸಾರುವ ವ್ಯವಸ್ಥೆ ಕಲ್ಪಿಸುವ ಕುರಿತು ಚರ್ಚೆ ನಡೆಯಿತು ಎಂದು ಹೇಳಲಾಗಿದೆ.

ADVERTISEMENT

ಕಳೆದ ತಿಂಗಳು ಕೂಡ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಿಶೀಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.