ADVERTISEMENT

ವಿಷಯ ಅಂತಿಮಗೊಳಿಸಲು ಸೂಚನೆ: ಸುಪ್ರೀಂ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 7 ಮೇ 2025, 14:36 IST
Last Updated 7 ಮೇ 2025, 14:36 IST
ಹಾಸ್ಯಕ್ಕೆ ಪ್ರತಿಕ್ರಿಯಿಸುವ ಕುರಿತು ಸೂಚನೆ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌
ಹಾಸ್ಯಕ್ಕೆ ಪ್ರತಿಕ್ರಿಯಿಸುವ ಕುರಿತು ಸೂಚನೆ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌   

ನವದೆಹಲಿ (ಪಿಟಿಐ): ಆರೋಪಿಯನ್ನು ಬಂಧಿಸಿ, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ ಹೊಂದಿರುವ ಅಧಿಕಾರವನ್ನು ಎತ್ತಿಹಿಡಿದಿರುವ ತೀರ್ಪನ್ನು ಪ್ರಶ್ನಿಸಿರುವ ಅರ್ಜಿಯ ಮೂಲಕ ತೀರ್ಮಾನ ಆಗಬೇಕಿರುವ ವಿಷಯಗಳ ಯಾವುವು ಎಂಬುದನ್ನು ಅಂತಿಮಗೊಳಿಸುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಉಜ್ವಲ್ ಭೂಯಾನ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ತ್ರಿಸದಸ್ಯರ ಪೀಠವು ಕೇಂದ್ರಕ್ಕೆ ಸೂಚನೆ ನೀಡಿದೆ. ವಿಚಾರಣೆಯನ್ನು ಆಗಸ್ಟ್‌ 6ಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT