ತಿರುವನಂತಪುರ: ಕೇರಳದ ಪ್ರಸಿದ್ದ ಅನಂತ ಪದ್ಮನಾಭ ದೇಗುಲದಲ್ಲಿ ಸ್ವಚ್ಛತೆ ಮಾಡುವಾಗ ಪೊಲೀಸ್ ಸಿಬ್ಬಂದಿಯೊಬ್ಬರು ಆಕಸ್ಮಿಕವಾಗಿ ಗುಂಡು ಹಾರಿಸಿದ ಘಟನೆ ಸೋಮವಾರ ಜರುಗಿದೆ.
ದೇವಾಲಯದಲ್ಲಿ ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಯ ಶಸ್ತ್ರಾಸ್ತ್ರಗಳನ್ನು ಇಡಲಾಗಿದ್ದ ಕೋಣೆಯಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಅವಘಡ ಸಂಭವಿಸಿಲ್ಲ.
ಕರ್ತವ್ಯ ಮುಗಿಸಿದ ನಂತರ ಮತ್ತೊಬ್ಬ ಪೊಲೀಸ್ ಸಿಬ್ಬಂದಿಗೆ ಪಿಸ್ತೂಲ್ ಹಸ್ತಾಂತರ ಮಾಡಲು ಅದನ್ನು ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದ ಘಟನೆ ಜರುಗಿದೆ.
ಆಕಸ್ಮಿಕ ಗುಂಡು ಹಾರಾಟ ಎಂದು ಪ್ರಕರಣ ದಾಖಲಿಸಲಾಗಿದ್ದು, ಈ ಕುರಿತು ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.