ನರ್ಮದಾ (ಗುಜರಾತ್): ಸರದಾರ್ ವಲ್ಲಭಬಾಯ್ ಪಟೇಲ್ ಅವರ ಪ್ರತಿಮೆಯನ್ನು ಒಎಲ್ ಎಕ್ಸ್ ನಲ್ಲಿ ಜಾಹೀರಾತು ನೀಡಿ ₹30, 000 ಕೋಟಿಗೆ ಮಾರಾಟಕ್ಕಿದೆ ಎಂದು ತಿಳಿಸಿದ ವ್ಯಕ್ತಿಯ ವಿರುದ್ಧ ಸ್ಥಳೀಯ ಸರ್ಕಾರಿ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಲಾಗಿದೆ.
ಕೆವಾಡಿಯಾ ಪೊಲೀಸ್ ಠಾಣೆಯಲ್ಲಿ ಈ ದೂರು ಸಲ್ಲಿಸಲಾಗಿದೆ. ಈ ಸಂಬಂಧ ಮಾತನಾಡಿದ ಜಿಲ್ಲಾಧಿಕಾರಿ ನೀಲೇಶ್ ದುಬೆ ಒಎಲ್ ಎಕ್ಸ್ ಯಾವುದೇ ಪರಿಶೀಲನೆ ನಡೆಸದೆ ಇಂತಹ ಜಾಹೀರಾತು ಪ್ರಕಟಿಸುವುದು ಸರಿಯಾದ ಕ್ರಮವಲ್ಲ. ಆದ್ದರಿಂದಲೇ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.