ಶ್ರೀನಗರ: ಇಲ್ಲಿನ ಬಟಮಾಲೂ ಪ್ರದೇಶದಲ್ಲಿ ಭಯೋತ್ಪಾದಕರು ಒಬ್ಬ ಪೊಲೀಸ್ ಕಾನ್ಸ್ಟೆಬಲ್ನನ್ನು ಭಾನುವಾರ ರಾತ್ರಿ ಗುಂಡಿಟ್ಟು ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ರಾತ್ರಿ 8 ಗಂಟೆಗೆ ಭಯೋತ್ಪಾದಕರು ಕಾನ್ಸ್ಟೆಬಲ್ ತೌಸಿಫ್ ಅಹ್ಮದ್ ಅವರನ್ನು ಅವರ ನಿವಾಸದ ಬಳಿಯೇ ಕೊಂದಿದ್ದಾರೆ’ ಎಂದು ಅಧಿಕಾರಿ ಹೇಳಿದ್ದಾರೆ. ಭಯೋತ್ಪಾದಕರ ಕೃತ್ಯವನ್ನು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಖಂಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.