ADVERTISEMENT

ಜನದಟ್ಟಣೆ ಸ್ಥಳದಲ್ಲೇ ಪೊಲೀಸ್ ಅಧಿಕಾರಿ ಮೇಲೆ ಉಗ್ರರ ದಾಳಿ

ಪಿಟಿಐ
Published 29 ಅಕ್ಟೋಬರ್ 2023, 14:34 IST
Last Updated 29 ಅಕ್ಟೋಬರ್ 2023, 14:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಶ್ರೀನಗರದ ಭಾರಿ ಜನದಟ್ಟಣೆ ಇರುವ ಪ್ರದೇಶದಲ್ಲಿ ಭಾನುವಾರ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪೊಲೀಸ್ ಅಧಿಕಾರಿ ಮಸರೂರ್ ಅಹ್ಮದ್ ವಾನಿ, ಉಗ್ರರಿಂದ ಗುಂಡಿನ ದಾಳಿಗೆ ಒಳಗಾದವರು. ಅವರು ಇಲ್ಲಿನ ಈದ್ಗಾ ಮೈದಾನದಲ್ಲಿ ಮಕ್ಕಳ ಜೊತೆ ಕ್ರಿಕೆಟ್ ಆಡುತ್ತಿದ್ದಾಗ, ಉಗ್ರರು ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT