ಭುವನೇಶ್ವರ: ಕಾಂಗ್ರೆಸ್ ಅಭ್ಯರ್ಥಿ ಅಜಿತ್ ಮಂಗರಾಜ್ ಅವರ ನಿಧನದಿಂದ ರದ್ದುಗೊಂಡಿದ್ದ ಒಡಿಶಾದ ಪಿಪ್ಲಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮೇ 13ರಂದು ನಡೆಯಲಿದೆ.
ಇಲ್ಲಿನ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಯ ಅಧಿಕಾರಿಯೊಬ್ಬರು ಭಾನುವಾರ ಈ ವಿಷಯ ತಿಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಯೊಬ್ಬರಷ್ಟೇ ನಾಮಪತ್ರ ಸಲ್ಲಿಸಬೇಕಾಗಿದೆ ಎಂದರು.
ಮಂಗರಾಜ್ ಅವರು ಕೋವಿಡ್ನಿಂದ ಇದೇ 14ರಂದು ಮೃತಪಟ್ಟಿದ್ದರು. ಈ ಕ್ಷೇತ್ರದಲ್ಲಿ ಇದೇ 17ರಂದು ಉಪಚುನಾವಣೆ ನಡೆಯಬೇಕಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.