ಪುದುಚೇರಿ: ಪುದುಚೇರಿ ವಿಧಾನಸಭೆಯ ಸ್ಪೀಕರ್ ಎಂಬಾಲಂ ಆರ್ ಸೆಲ್ವಂ ಅವರಿಗೆ ಲಘು ಹೃದಯಾಘಾತವಾಗಿದ್ದು, ಮಂಗಳವಾರ ಇಲ್ಲಿನ ಆಸ್ಪತ್ರೆಯೊಂದಕ್ಕೆ ಅವರನ್ನು ದಾಖಲಿಸಲಾಗಿದೆ.
ಇಂದಿರಾ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗೆ ಸೆಲ್ವಂ ಅವರನ್ನು ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಡೆಯಬೇಕಿದ್ದ ಬಜೆಟ್ ಅಧಿವೇಶನವನ್ನು ಉಪಸಭಾಪತಿ ಪಿ. ರಾಜವೇಲು ಅವರು ನಡೆಸಲಿದ್ದಾರೆ.
ವಿಧಾನಸಭೆಗೆ ಆಗಮಿಸುವ ಮುನ್ನವೇ ಅವರಿಗೆ ಹೃದಯಾಘಾತ ಆಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.