ADVERTISEMENT

ಕಿರಣ್ ಬೇಡಿಯನ್ನು ವಾಪಸ್ ಕರೆಸಿಕೊಳ್ಳಿ: ರಾಷ್ಟ್ರಪತಿಗೆ ಪುದುಚೆರಿ ಸಿ.ಎಂ ಮನವಿ

Pondy CM petitions Prez to recall Bedi Puducherry,

ಪಿಟಿಐ
Published 26 ಡಿಸೆಂಬರ್ 2019, 10:48 IST
Last Updated 26 ಡಿಸೆಂಬರ್ 2019, 10:48 IST

ಪುದುಚೆರಿ :‘ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರನ್ನು ಕೂಡಲೇ ವಾಪಸ್ ಕರೆಸಿಕೊಳ್ಳಿ’ ಎಂದು ಪುದುಚೆರಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಬುಧವಾರ ಮನವಿ ಮಾಡಿದ್ದಾರೆ.

‘ಕಿರಣ್ ಬೇಡಿ ಅವರು ಇಲ್ಲಿಗೆ ಬಂದಾಗಿನಿಂದಲೂ ಸರ್ಕಾರದ ವಿವಿಧ ಕಲ್ಯಾಣ ಕಾರ್ಯಕ್ರಮ ಮತ್ತು ನಿರ್ಧಾರಗಳ ಅನುಷ್ಠಾನಕ್ಕೆ ಅಡ್ಡಿಯಾಗುತ್ತಿದ್ದಾರೆ. ಅವರು ಪರ್ಯಾಯ ಸರ್ಕಾರ ನಡೆಸಲು ಪ್ರಯತ್ನಿಸುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ತೊಡಕಾಗಿದ್ದಾರೆ’ ಎಂದು ನಾರಾಯಣಸಾಮಿ ಅವರು ರಾಷ್ಟ್ರಪತಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ರಾಷ್ಟ್ರಪತಿ ಅವರು ಡಿ. 23ರಂದು ಪುದುಚೆರಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಬಂದಾಗ ಅವರಿಗೆ ಮನವಿ ಪತ್ರ ಸಲ್ಲಿಸಿರುವುದಾಗಿ ನಾರಾಯಣಸಾಮಿ ಬುಧವಾರ ಸುದ್ದಿಗಾರರಿಗೆ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.