ADVERTISEMENT

ಶ್ರೀನಗರ: ಹಿಮಪಾತ,ವಿಮಾನ ಸಂಚಾರ ಸ್ಥಗಿತ

ಪಿಟಿಐ
Published 4 ಜನವರಿ 2021, 8:14 IST
Last Updated 4 ಜನವರಿ 2021, 8:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಶ್ರೀನಗರದಲ್ಲಿ ಸೋಮವಾರವೂ ಹಿಮಪಾತ ಮುಂದುವರಿದಿದ್ದು, ಇದರಿಂದಾಗಿ ಸತತ ಎರಡನೇ ದಿನ ಶ್ರೀನಗರದ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ರನ್‌ವೇಯಿಂದ ಹಿಮವನ್ನು ತೆರವುಗೊಳಿಸಲಾಗಿದೆ. ವಾಯುಮಾರ್ಗವು ಸ್ಷಷ್ಟವಾಗಿ ಗೋಚರಿಸದ ಕಾರಣ ವಿಮಾನ ಹಾರಾಟ ಸೇವೆ ರದ್ದುಪಡಿಸಲಾಯಿತು’ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದರು.

‘ಹವಾಮಾನದಲ್ಲಿ ಸುಧಾರಣೆ ಕಂಡುಬಂದಲ್ಲಿ ವಿಮಾನಸೇವೆ ಪುನರಾರಂಭ ಆಗಲಿದೆ’ ಎಂದು ಹೇಳಿದರು. ಭಾನುವಾರವೂ ಹಿಮ, ಮಳೆಯಿಂದಾಗಿ ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.