ADVERTISEMENT

ಬ್ಯಾನರ್‌ ಪ್ರಕರಣ: ‘ಸುಪ್ರೀಂ’ ಮೊರೆ ಹೋದ ಉತ್ತರ ಪ್ರದೇಶ

ಪಿಟಿಐ
Published 11 ಮಾರ್ಚ್ 2020, 20:52 IST
Last Updated 11 ಮಾರ್ಚ್ 2020, 20:52 IST

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟದ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಿದ್ದಾರೆ ಎನ್ನಲಾದವರ ಭಾವಚಿತ್ರಗಳನ್ನು ಹೊಂದಿದ್ದ ಬ್ಯಾನರ್‌ಗಳನ್ನು ಕೂಡಲೇ ತೆರವುಗೊಳಿಸುವಂತೆ ಅಲಹಾಬಾದ್‌ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ನ್ಯಾಯಮೂರ್ತಿಗಳಾದ ಯು.ಯು. ಲಲಿತ್‌ ಮತ್ತು ಅನಿರುದ್ಧ ಬೋಸ್‌ ಅವರನ್ನೊಳಗೊಂಡಿರುವ ರಜಾಕಾಲದ ಪೀಠವು ಈ ಕುರಿತು ಗುರುವಾರ ವಿಚಾರಣೆ ನಡೆಸಲಿದೆ ಎಂದು ಉತ್ತರ ಪ್ರದೇಶದ ಅಡ್ವೊಕೇಟ್‌ ಜನರಲ್‌ ರಾಘವೇಂದ್ರ ಸಿಂಗ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT