ADVERTISEMENT

Top 10 News: ಈ ದಿನದ ಪ್ರಮುಖ 10 ಸುದ್ದಿಗಳು– ಜುಲೈ 30 , 2023

ರಾಜ್ಯ, ದೇಶ, ವಿದೇಶದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

ಪ್ರಜಾವಾಣಿ ವಿಶೇಷ
Published 30 ಜುಲೈ 2023, 15:12 IST
Last Updated 30 ಜುಲೈ 2023, 15:12 IST
ರಾಜ್ಯ, ದೇಶ, ವಿದೇಶ, ಬೆಂಗಳೂರು ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.
ರಾಜ್ಯ, ದೇಶ, ವಿದೇಶ, ಬೆಂಗಳೂರು ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.   

ರಾಜ್ಯ, ದೇಶ, ವಿದೇಶದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

ಅರಶಿನ ಗುಂಡಿ ಜಲಪಾತದಲ್ಲಿ ಜಾರಿ ಬಿದ್ದಿದ್ದ ಶರತ್ 8 ದಿನದ ಬಳಿಕ ಶವವಾಗಿ ಪತ್ತೆ

ಶರತ್‌ ಕುಮಾರ್‌

ಕಳೆದ ಭಾನುವಾರ ಪ್ರವಾಸಕ್ಕೆಂದು ಸ್ನೇಹಿತನೊಂದಿಗೆ ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತಕ್ಕೆ‌ ಬಂದು ವೀಕ್ಷಣೆ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಕೆ.ಎಚ್. ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್(23) ಮೃತದೇಹ ವಾರದ ಬಳಿಕ ಜಲಪಾತದ ಸಮೀಪದ ಮರದ ಪೊಟರೆಯ ಸಮೀಪ ಪತ್ತೆಯಾಗಿದೆ.

ಬಾಂಬೆ ಐಐಟಿ ಹಾಸ್ಟೆಲ್ ಕ್ಯಾಂಟೀನ್‌ನಲ್ಲಿ ‘ಸಸ್ಯಾಹಾರಿಗಳಿಗೆ ಮಾತ್ರ’ ಫಲಕ: ವಿವಾದ

ಪೋಸ್ಟರ್‌ (ಟ್ವಿಟರ್‌ ಚಿತ್ರ)

 ಬಾಂಬೆ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (IIT-B) ಹಾಸ್ಟೆಲ್‌ ಕ್ಯಾಂಟೀನ್‌ನಲ್ಲಿ ‘ ಸಸ್ಯಹಾರಿಗಳಿಗೆ ಮಾತ್ರ’ ಎಂದು ಫಲಕ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಆಹಾರ ತಾರತಮ್ಯ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. 

ADVERTISEMENT

ಪಾಕಿಸ್ತಾನದಲ್ಲಿ ರಾಜಕೀಯ ಪಕ್ಷವೊಂದರ ಸಭೆಯಲ್ಲಿ ಬಾಂಬ್ ಸ್ಫೋಟ: 40 ಜನ ಸಾವು

ಪಾಕಿಸ್ತಾನದಲ್ಲಿ ಬಾಂಬ್ ಸ್ಪೋಟ; 6 ಸಾವು

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಎಂಬಲ್ಲಿ ಇಸ್ಲಾಮಿಕ್ ರಾಜಕೀಯ ಪಕ್ಷದ ಸಭೆ ನಡೆಯುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ ಪರಿಣಾಮ 40 ಜನರು ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದಾರೆ.

ಕ್ರಿಕೆಟ್‌ಗೆ ನಿವೃತ್ತಿ ಪ್ರಕಟಿಸಿದ ಇಂಗ್ಲೆಂಡ್‌ ಬೌಲರ್‌ ಸ್ಟುವರ್ಟ್‌ ಬ್ರಾಡ್‌  

ಸ್ಟುವರ್ಟ್‌ ಬ್ರಾಡ್

ಇಂಗ್ಲೆಂಡ್‌ ವೇಗದ ಬೌಲರ್‌ ಸ್ಟುವರ್ಟ್‌ ಬ್ರಾಡ್‌ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಪ್ರಕಟಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್‌ ಪಂದ್ಯದ ಮೂರನೇ ದಿನದಾಟದ ಬಳಿಕ ತಮ್ಮ ನಿರ್ಧಾರ ಪ್ರಕಟಿಸಿದ್ದರು. ಆ್ಯಷಸ್‌ ಟೆಸ್ಟ್ ಸರಣಿಯ ಬಳಿಕ ನಿವೃತ್ತಿಯಾಗುವುದಾಗಿ ಬ್ರಾಡ್‌ ಶನಿವಾರ ಹೇಳಿದ್ದರು.

ಆಗಸ್ಟ್‌ 1ಕ್ಕೆ ಪ್ರಧಾನಿ ಮೋದಿಗೆ ‘ಲೋಕಮಾನ್ಯ ತಿಲಕ್‌ ರಾಷ್ಟ್ರ ಪ್ರಶಸ್ತಿ’ ಪ್ರದಾನ

ಪ್ರಧಾನಿ ಮೋದಿ

ಮಂಗಳವಾರ ಆಗಸ್ಟ್‌1 ರಂದು ಪುಣೆಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ಲೋಕಮಾನ್ಯ ತಿಲಕ್‌ ರಾಷ್ಟ್ರ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಇದೇ ದಿನ ಅವರು ದಗ್ದುಶೇತ್ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದು, ಬಳಿಕ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

ದೊಕ್ಸುರಿ ಚಂಡಮಾರುತ ಅಬ್ಬರ: ಭಾರಿ ಮಳೆಯಿಂದ ಚೀನಾ ರಾಜಧಾನಿ ಬೀಜಿಂಗ್‌ ಜನ ಕಂಗಾಲು!

ಬಾರಿ ಮಳೆಯಿಂದ ರಸ್ತೆಗಳಲ್ಲಿ ನೀರು ತುಂಬಿಕೊಂಡಿರುವುದು– ಎಪಿ ಚಿತ್ರ

ದೊಕ್ಸುರಿ ಚಂಡಮಾರುತ ಅಪ್ಪಳಿಸಿದ ಪರಿಣಾಮ ಉತ್ತರ ಚೀನಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬೀಜಿಂಗ್‌ನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ 20 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. 

ರಜೆಯ ಮೇಲೆ ಮನೆಗೆ ಬಂದಿದ್ದ ಯೋಧ ನಾಪತ್ತೆ: ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ

ಜಾವೇದ್ ಅಹ್ಮದ್

ದಕ್ಷಿಣ ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯಲ್ಲಿ ಯೋಧರೊಬ್ಬರು ನಾಪತ್ತೆಯಾಗಿದ್ದು ಅವರ ಪತ್ತೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.

ಸಿಎಂ, ಸಚಿವರು ಪ್ರವಾಹ–ಬರ ಸಂತ್ರಸ್ತರ ಕಡೆಗೆ ಗಮನ ಹರಿಸುತ್ತಿಲ್ಲ: ಬೊಮ್ಮಾಯಿ ಗರಂ

ಸಿದ್ದರಾಮಯ್ಯ ಮತ್ತು ಬಸವರಾಜ ಬೊಮ್ಮಾಯಿ

‘ರಾಜ್ಯದಲ್ಲಿ ಅತಿವೃಷ್ಟಿಯಿಂದ ಮನೆಗಳಿಗೆ ಹಾನಿಯಾಗಿದೆ. ದೊಡ್ಡ ಪ್ರಮಾಣದಲ್ಲಿ ಪ್ರಾಣಹಾನಿಯೂ ಆಗಿದೆ. ಸುಮಾರು 11 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದ್ದರೆ, ಉಳಿದೆಡೆ ಬರದ ಛಾಯೆ ಆವರಿಸಿದೆ. ಆದರೆ, ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಮಣಿಪುರ ರಾಜ್ಯಪಾಲರನ್ನು ಭೇಟಿಯಾದ ಇಂಡಿಯಾ ನಿಯೋಗ: ಅವಲೋಕನದ ವಿವರ ಸಲ್ಲಿಕೆ

ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿದ್ದ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ದ ಸಂಸದರು ಅಲ್ಲಿನ ರಾಜ್ಯಪಾಲರಾದ ಅನುಸೂಯ ಉಯಿಕೆಯವರನ್ನು ಭೇಟಿ ಮಾಡಿ ತಮ್ಮ ಅವಲೋಕನ ಕುರಿತ ಜ್ಞಾಪನಾಪತ್ರ ಸಲ್ಲಿಸಿದ್ದಾರೆ.

ಸಿಂಗಪುರದ 7 ಉಪಗ್ರಹಗಳನ್ನು ಕಕ್ಷೆ ಸೇರಿಸಿದ ಇಸ್ರೊ ರಾಕೆಟ್

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಭಾನುವಾರ ವಾಣಿಜ್ಯ ಮಿಷನ್‌ನ ಪಿಎಸ್‌ಎಲ್‌ವಿ-ಸಿ 56/ಡಿಎಸ್-ಎಸ್‌ಎಆರ್ ರಾಕೆಟ್ ಉಡ್ಡಯನವನ್ನು ಯಶಸ್ವಿಯಾಗಿ ನಡೆಸಿದೆ. ಎಲ್ಲ ಏಳು ಉಪಗ್ರಹಗಳನ್ನು ನಿಖರವಾಗಿ ಅವುಗಳ ಉದ್ದೇಶಿತ ಕಕ್ಷೆಗೆ ಸೇರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.