ಚೆನ್ನೈ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ನಟ ಪ್ರಕಾಶ್ ರಾಜ್ ಅವರಿಗೆ ಮಕ್ಕಳ್ ನೀಧಿ ಮೈಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಶುಭ ಹಾರೈಸಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಪ್ರಕಾಶ್ ರಾಜ್ ಶನಿವಾರ ಹೇಳಿದ್ದರು.
‘ನನ್ನ ಗೆಳೆಯ ಪ್ರಕಾಶ್ ರಾಜ್ ರಾಜಕೀಯ ಪ್ರಯಾಣಕ್ಕೆ ಶುಭಾಶಯ’ ಎಂದು ಕಮಲ್ ಟ್ವೀಟ್ ಮಾಡಿದ್ದಾರೆ. ಪ್ರಕಾಶ್ ರಾಜ್ ಅವರಿಗೆ ಆಮ್ ಆದ್ಮಿ ಪಾರ್ಟಿ ಸಹ ಬೆಂಬಲ ವ್ಯಕ್ತಪಡಿಸಿದೆ. ‘ಎಲ್ಲಾ ಒಳ್ಳೆಯ ಜನರು ರಾಜಕೀಯಕ್ಕೆ ಬರಬೇಕು’ ಎಂದು ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.