ADVERTISEMENT

ಕೇರಳ ವಿಧಾನಸಭೆ ಚುನಾವಣೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಿಜೆಪಿ ಉಸ್ತುವಾರಿ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 11:16 IST
Last Updated 3 ಫೆಬ್ರುವರಿ 2021, 11:16 IST
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ   

ನವದೆಹಲಿ: ಕೇರಳದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಉಸ್ತುವಾರಿಯನ್ನಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ನೇಮಿಸಲಾಗಿದೆ.

ಕರ್ನಾಟಕದ ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿಯ ಉಸ್ತುವಾರಿಯನ್ನಾಗಿ ಕೇಂದ್ರ ಸಚಿವ ಕಿಶನ್‌ ರೆಡ್ಡಿ ಹಾಗೂ ಸಹ ಉಸ್ತುವಾರಿಯನ್ನಾಗಿ ವಿ.ಕೆ. ಸಿಂಗ್‌ ಅವರನ್ನು ನೇಮಿಸಲಾಗಿದೆ.

ADVERTISEMENT

ಪುದುಚೇರಿಗೆ ಕೇಂದ್ರ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಉಸ್ತುವಾರಿ ಹಾಗೂ ಬಿಜೆಪಿ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯಸಭೆ ಸದಸ್ಯ ರಾಜೀವ್‌ ಚಂದ್ರಶೇಖರ್‌ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರನ್ನು ಅಸ್ಸಾಂ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಇವರ ಜತೆಗೆ, ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರನ್ನು ಸಹ ಉಸ್ತುವಾರಿಯಾಗಿರುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.