ನವದೆಹಲಿ: ರಂಜಾನ್ ಸಂದರ್ಭದಲ್ಲಿ ಮನೆಯಲ್ಲೇ ಪ್ರಾರ್ಥನೆ ಮಾಡುವಂತೆ ತಬ್ಲೀಗ್ ಜಮಾತ್ ನಾಯಕ ಮೌಲಾನಾ ಸಾದ್ ಖಂಡಾಲ್ವಿ ಮನವಿ ಮಾಡಿದ್ದಾರೆ.
‘ಭಾರತ ಹಾಗೂ ಹೊರ ದೇಶದಲ್ಲಿರುವ ಎಲ್ಲ ಅನುಯಾಯಿಗಳು ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ರಂಜಾನ್ ದಿನಗಳಲ್ಲಿ ಮನೆಯಿಂದಲೇ ಪ್ರಾರ್ಥನೆ ಮಾಡಬೇಕು. ಅಲ್ಲದೇ ಬೇರೆಯವರಿಗೆ ಮನೆಗೆ ಬರುವಂತೆ ಆಮಂತ್ರಣ ನೀಡಬಾರದು’ ಎಂದು ಅವರು ಹೇಳಿದ್ದಾರೆ.
ದೆಹಲಿಯನಿಜಾಮುದ್ದೀನ್ನಲ್ಲಿ ಧಾರ್ಮಿಕ ಸಭೆ ಆಯೋಜಿಸಿದ ಆರೋಪದಡಿ ಸಾದ್ ಸೇರಿದಂತೆ ಏಳು ಮಂದಿಯ ವಿರುದ್ಧದೆಹಲಿ ಪೊಲೀಸರು ಮಾ.31ರಂದು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.