ADVERTISEMENT

ಆಂಧ್ರಪ್ರದೇಶ ಭೇಟಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2022, 9:28 IST
Last Updated 4 ಡಿಸೆಂಬರ್ 2022, 9:28 IST
 ದ್ರೌಪದಿ ಮುರ್ಮು
ದ್ರೌಪದಿ ಮುರ್ಮು   

ವಿಜಯವಾಡ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎರಡು ದಿನಗಳ ಭೇಟಿಗಾಗಿ ಆಂಧ್ರಪ್ರದೇಶಕ್ಕೆ ಆಗಮಿಸಿದ್ದಾರೆ.

ಭಾನುವಾರ ಬೆಳಗ್ಗೆ 10.30ರ ಸುಮಾರಿಗೆ ಅವರನ್ನುರಾಜ್ಯಪಾಲ ವಿಶ್ವ ಭೂಷಣ್ ಹರಿಚಂದನ್, ಮುಖ್ಯಮಂತ್ರಿವೈ.ಎಸ್.ಜಗನ್ ಮೋಹನ್ ರೆಡ್ಡಿ ಹಾಗೂ ಸರ್ಕಾರದ ಪ್ರಮುಖ ಅಧಿಕಾರಿಗಳು ಅವರನ್ನು ಶಿಷ್ಟಾಚಾರದ ಪ್ರಕಾರ ಸ್ವಾಗತಿಸಿದರು.

ಇಲ್ಲಿನ ಪೊರಂಕಿಯಲ್ಲಿ ಅವರಿಗೆ ನಾಗರೀಕರಿಂದ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಿಎಂ, ರಾಜ್ಯಪಾಲರು ಸೇರಿದಂತೆ ಕೇಂದ್ರ ಸಚಿವ ಕಿಶನ್‌ ರೆಡ್ಡಿ ಸೇರಿದಂತೆ ಬಿಜೆಪಿ ನಾಯಕರು ಭಾಗವಹಿಸಿದ್ದರು.

ADVERTISEMENT

ಸೋಮವಾರ ಅವರು ತಿರುಪತಿಗೆ ಭೇಟಿ ನೀಡಲಿದ್ದಾರೆ. ಎರಡು ದಿನಗಳಲ್ಲಿ ಅವರು ಖಾಸಗಿ ಸೇರಿದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.