ADVERTISEMENT

ಜಮ್ಮು-ಕಾಶ್ಮೀರ: ಪ್ರಧಾನಿ ಸಭೆ ಬಳಿಕವೂ ಫಲಿತಾಂಶವಿಲ್ಲ ಎಂದ ಫಾರೂಕ್ ಅಬ್ದುಲ್ಲಾ

ಪಿಟಿಐ
Published 25 ಜುಲೈ 2021, 12:04 IST
Last Updated 25 ಜುಲೈ 2021, 12:04 IST
ಫಾರೂಕ್ ಅಬ್ದುಲ್ಲಾ
ಫಾರೂಕ್ ಅಬ್ದುಲ್ಲಾ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತುಕತೆ ನಡೆಸಿ ತಿಂಗಳು ಕಳೆದರೂ ಯಾವುದೇ ಫಲಿತಾಂಶ ಬಂದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಭಾನುವಾರ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರು ಜೂನ್‌ 24ರಂದು ಜಮ್ಮು ಮತ್ತು ಕಾಶ್ಮೀರದ ಪ್ರಮುಖ ನಾಯಕರ ಜತೆಗೆ ಸಭೆ ನಡೆಸಿದ್ದರು. ಆ ವೇಳೆ ಪ್ರಧಾನಿ ಅವರು ಜಮ್ಮು ಮತ್ತು ಕಾಶ್ಮೀರದ ಜನರ ಮನಸ್ಸನ್ನು ಗೆಲ್ಲಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದರು.

ಆದರೆ ಜಮ್ಮು ಮತ್ತು ಕಾಶ್ಮೀರಿಗಳ ಹೃದಯವನ್ನು ಗೆಲ್ಲುವ ಯಾವುದೇ ಪ್ರಯತ್ನಗಳು ನಡೆದಿಲ್ಲ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.