ADVERTISEMENT

ಜು.4ರಂದು ಪ್ರಧಾನಿಯಿಂದ ಅಲ್ಲೂರಿ ಪ್ರತಿಮೆ ಅನಾವರಣ 

ಮೋದಿ ಸ್ವಾಗತಕ್ಕೆ ಭೀಮಾವರಂ ಪಟ್ಟಣದಲ್ಲಿ ಭರದ ಸಿದ್ಧತೆ

ಪಿಟಿಐ
Published 30 ಜೂನ್ 2022, 14:45 IST
Last Updated 30 ಜೂನ್ 2022, 14:45 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ಅಮರಾವತಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಆಂಧ್ರಪ್ರದೇಶದ ಭೀಮಾವರಂ ಪಟ್ಟಣದ ಉದ್ಯಾನದಲ್ಲಿ ಸ್ವಾತಂತ್ರ್ಯ ಸೇನಾನಿ ಅಲ್ಲೂರಿ ಸೀತಾರಾಮ ರಾಜು ಅವರ ಪ್ರತಿಮೆಯನ್ನು ಜುಲೈ 4ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿದ್ದಾರೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಭೀಮಾವರಂ ಪಟ್ಟಣದಲ್ಲಿ ನಡೆದಿರುವ ಸಿದ್ಧತೆಗಳನ್ನು ವಿಶೇಷ ಮುಖ್ಯ ಕಾರ್ಯದರ್ಶಿ (ಪ್ರವಾಸೋದ್ಯಮ ಮತ್ತು ಸಂಸ್ಕೃತಿ) ರಜತ್‌ ಭಾರ್ಗವಗುರುವಾರ ಪರಿಶೀಲಿಸಿದರು.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಾಲ್ಕು ಹೆಲಿಪ್ಯಾಡ್‌ಗಳನ್ನು ಸಿದ್ಧಪಡಿಸಲಾಗಿದೆ.ಎಸ್‌ಪಿಜಿ ಸಿಬ್ಬಂದಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಭಾರ್ಗವ ತಿಳಿಸಿದರು.

ADVERTISEMENT

ಅಂದು ಪ್ರಧಾನಿ ಮೋದಿ ಅವರು ಹೈದರಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಗನ್ನಾವರಂನ ವಿಜಯವಾಡ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ನಂತರ ಹೆಲಿಕಾಪ್ಟರ್‌ನಲ್ಲಿ ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂಗೆ ತಲುಪಲಿದ್ದಾರೆ. ಅಲ್ಲೂರಿ ಸೀತಾರಾಮ ರಾಜು ಅವರ 125ನೇ ಜನ್ಮದಿನದ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಭೀಮಾವರಂ ಉದ್ಯಾನದಲ್ಲಿ ಸ್ಥಾಪಿಸಿರುವ ಅಲ್ಲೂರಿ ಸೀತಾರಾಮ ರಾಜು ಅವರ 30 ಅಡಿಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಇದೇ ವೇಳೆ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಷಣ ಮಾಡಲಿದ್ದಾರೆ. ನಂತರ ಮಧ್ಯಾಹ್ನ 1.10ಕ್ಕೆ ವಿಜಯವಾಡ ವಿಮಾನ ನಿಲ್ದಾಣದಿಂದ ನವದೆಹಲಿಗೆ ವಾಪಸಾಗಲಿದ್ದಾರೆ ಎಂದು ಪ್ರಧಾನಿ ಕಚೇರಿ ಬಿಡುಗಡೆ ಮಾಡಿರುವಪ್ರವಾಸ ಪಟ್ಟಿಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.