ADVERTISEMENT

ಬಿಧೂಢಿ ವಿರುದ್ಧದ ದೂರು: ಅ.10ರಂದು ವಿಚಾರಣೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2023, 12:31 IST
Last Updated 4 ಅಕ್ಟೋಬರ್ 2023, 12:31 IST
ರಮೇಶ್ ಬಿಧೂಢಿ
ರಮೇಶ್ ಬಿಧೂಢಿ   

ನವದೆಹಲಿ: ಲೋಕಸಭೆಯ ವಿಶೇಷ ಅಧಿವೇಶನದಲ್ಲಿ ಬಿಜೆಪಿ ಸಂಸದ ರಮೇಶ್‌ ಬಿಧೂಢಿ ಅವರು ಬಿಎಸ್‌ಪಿ ಸಂಸದ ಡ್ಯಾನಿಶ್‌ ಅಲಿ ವಿರುದ್ಧ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಕುರಿತು ದಾಖಲಾಗಿರುವ ದೂರುಗಳ ಬಗ್ಗೆ ಹಕ್ಕುಬಾದ್ಯತಾ ಸಮಿತಿಯು ಅ.10ರಂದು ವಿಚಾರಣೆ ಆರಂಭಿಸಲಿದೆ.

ಮುಂದಿನ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಬಿಧೂಢಿ ಅವರಿಗೆ ಸಮಿತಿ ಸಮನ್ಸ್‌ ಜಾರಿ ಮಾಡಿದೆ.

ಸೆ.19ರಂದು ನಡೆದ ವಿಶೇಷ ಅಧಿವೇಶನ ಸಂದರ್ಭದಲ್ಲಿ ‘ಚಂದ್ರಯಾನ– 3 ಯೋಜನೆ’ ಕುರಿತ ಚರ್ಚೆ ವೇಳೆ ಬಿಧೂಢಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಬಿಧೂಢಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದರು. ಕೋಮುವಾದಿ ಸ್ವರೂಪದ ಹೇಳಿಕೆಯನ್ನು ಕಡತದಿಂದ ತೆಗೆದು ಹಾಕಿದ್ದರು.

ADVERTISEMENT

ಬಿಧೂಢಿ ಹೇಳಿಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಸದನದ ಒಳಗೇ ವಿಷಾದ ವ್ಯಕ್ತಪಡಿಸಿದ್ದರು.

ಬಿಜೆಪಿ ಸಹ ಬಿಢೂಢಿಗೆ ಷೋಕಾಸ್‌ ನೋಟಿಸ್‌ ಜಾರಿ ಮಾಡಿತ್ತು. ಆದರೆ ಇದೇ ಸಂದರ್ಭದಲ್ಲಿ ಅವರಿಗೆ ರಾಜಸ್ಥಾನದ ಟೊಂಕ್‌ ಜಿಲ್ಲೆಯಲ್ಲಿ ಚುನಾವಣೆಯ ಜವಾಬ್ದಾರಿಯನ್ನೂ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.