ADVERTISEMENT

ಮಹಿಳಾ ಅಧಿಕಾರಿ ಆತ್ಮಹತ್ಯೆ: ಪಾರದರ್ಶಕವಾಗಿ ತನಿಖೆಯಾಗಲಿ– ಪ್ರಿಯಾಂಕಾ

ಪಿಟಿಐ
Published 12 ಜುಲೈ 2020, 9:29 IST
Last Updated 12 ಜುಲೈ 2020, 9:29 IST
ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ   

ನವದೆಹಲಿ:ಉತ್ತರ ಪ್ರದೇಶದ ಮನಿಯಾ ನಗರ ಪಂಚಾಯತ್‌ ಕಾರ್ಯನಿರ್ವಹಣಾ ಅಧಿಕಾರಿ ಮಣಿ ಮಂಜರಿ ರೈ ಆತ್ಮಹತ್ಯೆ ಪ್ರಕರಣ ಕುರಿತುಪಾರದರ್ಶಕವಾಗಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಒತ್ತಾಯಿಸಿದ್ದಾರೆ.

ಮಣಿ ಮಂಜರಿ ಅವರನ್ನು ಬಾಲಿಯಾಗೆ ವರ್ಗಾಯಿಸಲಾಗಿತ್ತು. ಈ ವೇಳೆ ಅವರು ಇಲಾಖೆಯ ಕಾರ್ಯವೈಖರಿ ಬಗ್ಗೆ ಪ್ರಶ್ನಿಸಿದ್ದರು ಎಂದುಪ್ರಿಯಾಂಕಾ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಿಯಾಂಕಾ, ‘ಮಣಿ ಮಂಜರಿಯ ಕುಟುಂಬದ ಸದಸ್ಯರು ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ನಾನು, ಉತ್ತರ ಪ್ರದೇಶದ ಮುಖ್ಯಮಂತ್ರಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇನೆ’ ಎಂದು ಹೇಳಿದ್ದಾರೆ.

ADVERTISEMENT

ಮಣಿ ಮಂಜರಿ ರೈ(27) ಕಳೆದ ಸೋಮವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ತಂದೆ ಇದು ಕೊಲೆ ಪ್ರಕರಣ ಎಂದು ದೂರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.