ನವದೆಹಲಿ (ಪಿಟಿಐ): ಅಧಿಕಾರಕ್ಕೆ ಬಂದು ಶತದಿನ ಪೂರೈಸಿದ ಸಂಭ್ರಮಾಚರಣೆಗೆ ಮುಂದಾಗಿರುವ ಬಿಜೆಪಿ ನೇತೃತ್ವದ ಎನ್ಡಿಎ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹರಿಹಾಯ್ದಿದ್ದಾರೆ.
ಆಟೊಮೊಬೈಲ್, ಸಾರಿಗೆ ಮತ್ತು ಗಣಿ ವಲಯಗಳು ಈ ಸಂಭ್ರಮಾಚರಣೆಯನ್ನು ತಮ್ಮ ಅವನತಿ ಎಂಬಂತೆ ಗಮನಿಸಲಿವೆ ಎಂದೂ ಅವರು ವ್ಯಂಗ್ಯವಾಡಿದ್ದಾರೆ.
ಕೇಂದ್ರ ಸರ್ಕಾರ ಶತದಿನ ಸಂಭ್ರಮಕ್ಕೆ ಸಿದ್ಧತೆ ನಡೆಸಿದೆ ಎಂಬುದನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಪ್ರಿಯಾಂಕಾ, ಆಟೊಮೊಬೈಲ್ ಸೇರಿ ವಿವಿಧ ಕ್ಷೇತ್ರಗಳು ಎದುರಿಸುತ್ತಿರುವ ಸಮಸ್ಯೆಯನ್ನು ಅವರು ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.