ADVERTISEMENT

ಕಾರಿನ ಗ್ಲಾಸ್‌ ಸ್ವಚ್ಛಗೊಳಿಸಿದ ಪ್ರಿಯಾಂಕಾ ಗಾಂಧಿ: ವಿಡಿಯೊ ವೈರಲ್‌

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2021, 10:40 IST
Last Updated 4 ಫೆಬ್ರುವರಿ 2021, 10:40 IST

ರಾಮ್‌ಪುರ (ಉತ್ತರ ಪ್ರದೇಶ): ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದ ರಾಮ್‌ಪುರಕ್ಕೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ಕಾರುಗಳ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದೆ. ಮಂಜು ಆವೃತವಾಗಿ, ರಸ್ತೆ ಅಸ್ಪಷ್ಟವಾಗಿದ್ದರಿಂದ ಈ ಘಟನೆ ನಡೆದಿದೆ.  

ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ರಸ್ತೆ ಸ್ಪಷ್ಟವಾಗಿ ಕಾಣದ ಕಾರಣಕ್ಕೆ ಪ್ರಿಯಾಂಕಾ ಗಾಂಧಿ ಅವರ ಕಾರನ್ನು ಕೆಲಕಾಲ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ತಮ್ಮ ಕಾರಿನ ಗಾಜಿನ ಮೇಲಿದ್ದ ದೂಳನ್ನು ಸ್ವತಃ ಪ್ರಿಯಾಂಕಾ ಗಾಂಧಿ ಅವರೇ ಒರೆಸಿದ್ದಾರೆ. ಈ ವಿಡಿಯೊ ಸದ್ಯ ಸಾಮಾಜಿಕ ತಾಣಗಗಳಲ್ಲಿ ವೈರಲ್‌ ಆಗಿದೆ.

ADVERTISEMENT

ಮೃತ ರೈತನ ಕುಟಂಬಸ್ಥರ ಭೇಟಿ

ಜನವರಿ 26ರಂದು ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟಿದ್ದ ಉತ್ತರ ಪ್ರದೇಶದ ರಾಮ್‌ಪುರದ ರೈತನ ನಿವಾಸಕ್ಕೆ ಪ್ರಿಯಾಂಕಾ ಗುರುವಾರ ಭೇಟಿ ನೀಡಿದ್ದರು. ಕುಟುಂಬಸ್ಥರಿಗೆ ಅವರು ಸಾಂತ್ವನ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.