ಆಜಂಘರ್(ಉತ್ತರಪ್ರದೇಶ): ರೈತರ ಸಾಲಮನ್ನಾ ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಇದೇ ತಿಂಗಳು ಬೃಹತ್ ಪ್ರತಿಭಟನೆಹಮ್ಮಿಕೊಂಡಿದೆ.
ಪೂರ್ವ ವಲಯ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾಗಾಂಧಿ ಪ್ರತಿಭಟನೆ ನೇತೃತ್ವ ವಹಿಸಲಿದ್ದಾರೆ. ಸಂದರ್ಭದಲ್ಲಿಕಬ್ಬು ಬೆಳೆಗಾರರ ಸಮಸ್ಯೆ, ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕೆಂಬ ಬೇಡಿಕೆಯೂ ಸೇರಿದಂತೆ ಹಲವು ಸಮಸ್ಯೆಗಳತ್ತ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಲಾಗಿದೆ ಎಂದು ಮಾಧ್ಯಮಗಳು ತಿಳಿಸಿವೆ.
ಪೂರ್ವಭಾವಿಯಾಗಿ ಸ್ಥಳೀಯ ಮುಖಂಡರೊಡನೆ ಚರ್ಚೆ ಮಾಡಲು ಬುಧವಾರ ಆಜಂಘರ್ಗೆ ಭೇಟಿ ನೀಡಿದ ಪ್ರಿಯಾಂಕಾ, ಇದೇ ಸಮಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತರನ್ನು ಭೇಟಿ ಮಾಡಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ನಂತರ ಪೊಲೀಸರ ದೌರ್ಜನ್ಯಕ್ಕೆ ಒಳಗಾಗಿ ಗಾಯಗೊಂಡವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಫೆ.23ರಿಂದ ಆರಂಭವಾಗುವ ಮೊದಲ ಪ್ರತಿಭಟನಾ ರ್ಯಾಲಿ ಇಲ್ಲಿನ ಬಸ್ತಿ ಜಿಲ್ಲೆಯಲ್ಲಿ ನಡೆಯಲಿದೆ. ಉತ್ತರಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.