ADVERTISEMENT

ಹೊಸ ವರ್ಷದ ದಿನ: ಕೊರೆವ ಚಳಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ

ಸರ್ಕಾರ – ರೈತ ಸಂಘಟನೆಗಳ ನಡುವೆ ಮೂಡದ ಒಮ್ಮತ

ಪಿಟಿಐ
Published 1 ಜನವರಿ 2021, 7:26 IST
Last Updated 1 ಜನವರಿ 2021, 7:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದೆಹಲಿ: ಸರ್ಕಾರದೊಂದಿಗೆ ನಡೆದ ಮಾತುಕತೆಗಳು ಯಶಸ್ವಿಯಾಗದ ಕಾರಣ ಕೊರೆಯ ಚಳಿಯನ್ನೂ ಲೆಕ್ಕಿಸದೇ ದೆಹಲಿಯ ಸಿಂಘು ಗಡಿಯಲ್ಲಿ ಸಾವಿರಾರು ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಹೊಸ ವರ್ಷದ ದಿನವಾದ ಶುಕ್ರವಾರದಂದು ಸಿಂಘು ಗಡಿ ಪ್ರದೇಶದಲ್ಲಿ 1.1 ಡಿಗ್ರಿ ಸೆಲ್ಷಿಯಸ್‌ ತಾಪಮಾನ ದಾಖಲಾಗಿದ್ದು, ಇದು ಹದಿನೈದು ವರ್ಷಗಳಲ್ಲೇ ಅತ್ಯಂತ ಕಡಿಮೆ ತಾಪಮಾನವಾಗಿದೆ. ಇಂಥ ಕೊರೆಯುವ ಚಳಿಯಲ್ಲೂ ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಬುಧವಾರ ನಡೆದ ಸಭೆಯಲ್ಲಿ ವಿದ್ಯುತ್ ದರ ಹೆಚ್ಚಳ ಮತ್ತು ಕೃಷಿ ತ್ಯಾಜ್ಯ ಸುಡುವುದರ ವಿರುದ್ಧ ದಂಡ ವಿಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರೈತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿತ್ತು. ಆದರೆ, ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಹಾಗೂ ಕನಿಷ್ಠ ಬೆಂಬಲ ಬೆಲೆ ಕುರಿತು ಖಾತರಿ ನೀಡುವಂತಹ ವಿಚಾರದಲ್ಲಿ ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಒಮ್ಮತ ಮೂಡಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.