ADVERTISEMENT

ದಾಖಲೆ ಒದಗಿಸಿ ಇಲ್ಲವೇ ಕಾನೂನು ಕ್ರಮಕ್ಕೆ ಸಿದ್ಧರಾಗಿ: ಆತಿಶಿಗೆ ಬಿಜೆಪಿ ಸವಾಲು

ಪಿಟಿಐ
Published 2 ಏಪ್ರಿಲ್ 2024, 11:06 IST
Last Updated 2 ಏಪ್ರಿಲ್ 2024, 11:06 IST
<div class="paragraphs"><p>ದೆಹಲಿ ಸಚಿವೆ ಆತಿಶಿ&nbsp;</p></div>

ದೆಹಲಿ ಸಚಿವೆ ಆತಿಶಿ 

   

ನವದೆಹಲಿ: ಬಿಜೆಪಿ ಪಕ್ಷಕ್ಕೆ ಸೇರುವಂತೆ ಆಪ್ತ ಸಹಾಯಕರೊಬ್ಬರ ಮೂಲಕ ನನ್ನನ್ನು ಸಂಪರ್ಕಿಸಲಾಗಿದೆ ಎಂಬ ದೆಹಲಿ ಸಚಿವೆ ಆತಿಶಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಸೂಕ್ತ ದಾಖಲೆ ಒದಗಿಸಿ, ಇಲ್ಲದಿದ್ದರೆ ಕಾನೂನು ಕ್ರಮಕ್ಕೆ ಸಿದ್ಧರಾಗಿ ಎಂದು ಹೇಳಿದೆ.

ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ವೀರೇಂದ್ರ ಸಚ್‌ದೇವ, ಬಿಜೆಪಿಗೆ ಸೇರಲು ಆತಿಶಿಯನ್ನು ಸಂಪರ್ಕಿಸಲಾಗಿದೆ ಎಂಬ ಹೇಳಿಕೆಗೆ ಇಂದು ಸಂಜೆಯೊಳಗೆ ದಾಖಲೆಗಳನ್ನು ಒದಗಿಸಲು ವಿಫಲರಾದರೆ ಕಾನೂನು ಕ್ರಮಕ್ಕೆ ಸಿದ್ಧರಾಗಿ ಎಂದು ಸವಾಲು ಹಾಕಿದ್ದಾರೆ.

ADVERTISEMENT

ಆಧಾರರಹಿತ ಆರೋಪಗಳು ಮಾಡಿ, ಆದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆತಿಶಿ ಅವರು ಸಂಜೆಯೊಳಗೆ ಕ್ಷಮೆಯಾಚಿಸಿಬೇಕು ಹಾಗೂ ಸುಳ್ಳು ಹೇಳಿಕೆಯನ್ನು ಹಿಂಪಡೆಯಬೇಕು ಎಂದು ವೀರೇಂದ್ರ ಹೇಳಿದ್ದಾರೆ.

ರಾಜಕೀಯ ಭವಿಷ್ಯ ಉಳಿಸಿಕೊಳ್ಳಲು ತಮ್ಮ ಪಕ್ಷ ಸೇರುವಂತೆ ನನ್ನ ಆಪ್ತ ಸಹಾಯಕರೊಬ್ಬರ ಮೂಲಕ ಬಿಜೆಪಿ ನನ್ನನ್ನು ಸಂಪರ್ಕಿಸಿದೆ. ಬಿಜೆಪಿಗೆ ಸೇರದೆ ಹೋದರೆ ಮುಂಬರುವ ದಿನಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ನನ್ನನ್ನೂ ಬಂಧಿಸುವ ಸಾಧ್ಯತೆಯಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.