ಚೆನ್ನೈ: ‘ರಾಜ್ಯಪಾಲರಾದ ಕಿರಣ್ ಬೇಡಿ ಏಕಪಕ್ಷೀಯವಾಗಿ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ’ ಎಂದು ದೂರಿ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅವರು ಬೇಡಿ ಅವರ ನಿವಾಸದ ಎದುರು ಬುಧವಾರ ಧರಣಿ ನಡೆಸಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದರು.
ತಮ್ಮ ತಮ್ಮ ಕಚೇರಿಗಳಿಂದ ಹೊರಟ ಸಂಪುಟ ಸಹೋದ್ಯೋಗಿಗಳೊಂದಿಗೆ ರಾಜ್ಯಪಾಲರ ಗೃಹ–ಕಚೇರಿ ರಾಜ್ ನಿವಾಸದ ಬಳಿ ಮಧ್ಯಾಹ್ನ ಬಂದ ಮುಖ್ಯಮಂತ್ರಿ ನಾರಾಯಣಸ್ವಾಮಿ, ರಾತ್ರಿಯಿಡೀ ಧರಣಿ ನಡೆಸಿದರು.
ಧರಣಿ ನಡೆಸುತ್ತಿದ್ದ ಸ್ಥಳದ ಬಳಿಯ ರಸ್ತೆಯಲ್ಲಿಯೇ ಊಟ ಮಾಡಿದ ಅವರು, ಕೆಲವು ಕಡತಗಳನ್ನು ಅದೇ ಸ್ಥಳದಲ್ಲಿ ವಿಲೇವಾರಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.