ADVERTISEMENT

ಕಿರಣ್ ಬೇಡಿ ವಿರುದ್ಧ ಪುದುಚೇರಿ ಸಿ.ಎಂ ಸಹಿ ಅಭಿಯಾನ

ಪಿಟಿಐ
Published 26 ಜನವರಿ 2021, 13:58 IST
Last Updated 26 ಜನವರಿ 2021, 13:58 IST
ಕಿರಣ್ ಬೇಡಿ
ಕಿರಣ್ ಬೇಡಿ    

ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಆಗ್ರಹಿಸಿ ಪುದುಚೇರಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ವಿ. ನಾರಾಯಣ ಸಾಮಿ ಮಂಗಳವಾರ ಸಹಿ ಅಭಿಯಾನ ಆರಂಭಿಸಿದ್ದಾರೆ.

ಕಾಂಗ್ರೆಸ್ ನೇತೃತ್ವದ ಸೆಕ್ಯುಲರ್ ಡೆಮಾಕ್ರಟಿಕ್ ಅಲಯನ್ಸ್ (ಎಸ್‌ಡಿಎ) ನೇತೃತ್ವದಲ್ಲಿ ಸಹಿ ಅಭಿಯಾನ ನಡೆಸಲಾಗುತ್ತಿದೆ. ಎಡಪಕ್ಷಗಳು ಸೇರಿದಂತೆ ಇತರ ಮಿತ್ರ ಪಕ್ಷಗಳ ಪ್ರತಿನಿಧಿಗಳು ಅಭಿಯಾನದಲ್ಲಿ ಹಾಜರಿದ್ದರು. ಆದರೆ, ಅಭಿಯಾನದಲ್ಲಿ ಡಿಎಂಕೆ ಪಕ್ಷದ ಪ್ರತಿನಿಧಿಗಳು ಗೈರು ಹಾಜರಾಗಿದ್ದರು.

ಶಾಸಕ ನಮಸ್ಸಿವಾಯಂ ಅವರ ರಾಜೀನಾಮೆಯಿಂದಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ ಎಸ್‌ಡಿಎ ಸಂಖ್ಯೆ 12ಕ್ಕೆ ಇಳಿದಿದೆ. ಸದ್ಯಕ್ಕೆ ಎಸ್‌ಡಿಎ ಡಿಎಂಕೆ ಪಕ್ಷದ ಮೂವರು ಬೆಂಬಲಿಗರ ಮೇಲೆ ಅವಲಂಬಿತವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.