ಪುದುಚೇರಿ: ಇಲ್ಲಿನ ಪ್ರಸಿದ್ಧ ಮನಕುಲ ವಿನಾಯಕ ದೇಗುಲಕ್ಕೆ ಸೇರಿದ್ದ ಆನೆಯೊಂದು ಹೃದಯಾಘಾತದಿಂದ ಬುಧವಾರ ಮೃತಪಟ್ಟಿದೆ. ಈ ಆನೆಗೆಲಕ್ಷ್ಮಿ ಎಂದು ನಾಮಕರಣ ಮಾಡಲಾಗಿತ್ತು.
ಸರ್ಕಾರಿ ಕಾಲೇಜಿನ ಮೈದಾನದಲ್ಲಿ ಆನೆ ವಿಹಾರ ಮಾಡುತ್ತಿದ್ದಾಗಹಠಾತ್ ಕುಸಿದು ಬಿದ್ದಿದೆ. ಮಾಹಿತಿ ತಿಳಿದು ಪಶುವೈದ್ಯರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಆನೆ ಮೃತಪಟ್ಟಿತ್ತು ಎಂದುವಿನಾಯಕ ದೇಗುಲದ ಪ್ರಧಾನ ಆರ್ಚಕರು ಹೇಳಿದ್ದಾರೆ.
ಆನೆಗೆ ಯಾವುದೇ ಕಾಯಿಲೆಗಳು ಇರಲಿಲ್ಲ ಆದರೆ ಆನೆ ಹೃದಯಾಘಾತದಿಂದ ಮೃತಪಟ್ಟಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
1995ರಲ್ಲಿ ಈಆನೆಯನ್ನು ಕೈಗಾರಿಕೋದ್ಯಮಿಯೊಬ್ಬರು ದೇವಸ್ಥಾನಕ್ಕೆ ದಾನ ಮಾಡಿದ್ದರು.ಲಕ್ಷ್ಮಿ ಆನೆಯ ಆಶೀರ್ವಾದಪಡೆಯಲು ಕೇರಳ, ಆಂಧ್ರ, ಕರ್ನಾಟಕ, ತಮಿಳುನಾಡು ಸೇರಿದಂತೆ ವಿದೇಶಿ ಭಕ್ತರು ಕೂಡ ಬರುತ್ತಿದ್ದರು.
ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಆಣೆಯ ಅಂತ್ಯಕ್ರಿಯೆ ನಡೆಸಲಾಯಿತು ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರಾಮಚಂದ್ರನ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.