ADVERTISEMENT

ತ್ರಿವರ್ಣ ಧ್ವಜ ಕೆಳಗಿಳಿಸಿದ ಪ್ರಕರಣ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ

ಪಿಟಿಐ
Published 20 ಮಾರ್ಚ್ 2023, 19:25 IST
Last Updated 20 ಮಾರ್ಚ್ 2023, 19:25 IST
   

ನವದೆಹಲಿ: ‘ಖಾಲಿಸ್ತಾನ ಪರವಾಗಿ ಲಂಡನ್‌ನಲ್ಲಿ ಭಾನುವಾರ ಹೋರಾಟ ನಡೆಸುವ ವೇಳೆ ಭಾರತೀಯ ಹೈಕಮಿಷನ್‌ ಎದುರು ಅಳವಡಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ್ದ ಪ್ರತ್ಯೇಕತಾವಾದಿಗಳನ್ನು ಕೂಡಲೇ ಬಂಧಿಸುವಂತೆ ಬ್ರಿಟನ್ ಸರ್ಕಾರವನ್ನು ಭಾರತ ಒತ್ತಾಯಿಸಿದೆ’ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್‌ ಕ್ವಾತ್ರಾ ಸೋಮವಾರ ತಿಳಿಸಿದ್ದಾರೆ.

‘ಘಟನೆ ಸಂಬಂಧ ಭಾರತವು ಪ್ರತಿಭಟನೆ ದಾಖಲಿಸಿದೆ. ಭಾರತೀಯ ಹೈಕಮಿಷನ್‌ಗೆ ಸೂಕ್ತ ಭದ್ರತೆ ಒದಗಿಸುವಂತೆಯೂ ಆಗ್ರಹಿಸಲಾಗಿದೆ’ ಎಂದಿದ್ದಾರೆ.

ಕಾಂಗ್ರೆಸ್‌ ಖಂಡನೆ: ಲಂಡನ್‌ನಲ್ಲಿ ನಡೆದಿರುವ ಘಟನೆಯನ್ನು ಕಾಂಗ್ರೆಸ್‌ ಖಂಡಿಸಿದೆ.

ADVERTISEMENT

‘ಬ್ರಿಟನ್ ಸರ್ಕಾರವು ತನ್ನ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲವಾಗಿದ್ದು, ಘಟನೆಯ ನೈತಿಕ ಹೊಣೆ ಹೊರಬೇಕು’ ಎಂದು ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.